<p><strong>ಭಾಲ್ಕಿ:</strong> ‘ಮಕ್ಕಳು ಮನೆಯಲ್ಲಿ ಪಾಲಕರ ಮತ್ತು ಶಾಲೆಯಲ್ಲಿ ಶಿಕ್ಷಕರ ನಡೆ, ನುಡಿಯನ್ನು ಅನುಕರಿಸುತ್ತಾರೆ. ಹೀಗಾಗಿ ಪಾಲಕರು, ಶಿಕ್ಷಕರ ನಡೆ, ನುಡಿಗಳು ವಿದ್ಯಾರ್ಥಿಗಳಿಗೆ ಮಾದರಿ ಆಗುವಂತೆ ಇರಬೇಕು’ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.</p>.<p>ಪಟ್ಟಣದ ಲಕ್ಷ್ಮಿಬಾಯಿ ಖಂಡ್ರೆ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಪಠ್ಯ ಚಟುವಟಿಕೆಗಳಿಗೆ ನೀಡುವಷ್ಟೇ ಮಹತ್ವವನ್ನು ಸಹಪಠ್ಯ ಚಟುವಟಿಕೆಗಳಿಗೂ ನೀಡಬೇಕು’ ಎಂದು ತಿಳಿಸಿದರು.</p>.<p>ಶಿಕ್ಷಣ ತಜ್ಞ ಗುರುರಾಜ ಕರಜಗಿ ಮಾತನಾಡಿ, ‘ಮಕ್ಕಳಿಗೆ ನಿರ್ಜೀವ ವಸ್ತುಗಳ(ಮೊಬೈಲ್, ಟಿ.ವಿ) ಜೊತೆ ಸ್ನೇಹವಾದಾಗ ಬಂಧಗಳು ದೂರವಾಗುತ್ತವೆ. ಹೀಗಾಗಿ, ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರ ಮಾಡಬೇಕು. ಅವರಲ್ಲಿ ಮೌಲ್ಯ ಬಿತ್ತುವ ಕಾರ್ಯ ಮಾಡಬೇಕು’ ಎಂದು ಹೇಳಿದರು.</p>.<p>ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಸಂತೋಷ ಮಿರಾಜಕರ, ವಿದ್ಯಾರ್ಥಿಗಳಾದ ಸೀಮಾರಾಣಿ ಸಂದೀಪ, ಸಬೀನಾರಾಣಿ ಸಾಗರ ಮಾತನಾಡಿದರು.</p>.<p>ಇದೇ ವೇಳೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಢೋಲೆ, ಪ್ರಾಚಾರ್ಯ ಉದಯಕುಮಾರ ಕಲ್ಯಾಣೆ, ಸಂತೋಷಕುಮಾರ ತೀರ್ಥೆ, ಭೀಮರಾವ ಗಿರಿ, ಲಕ್ಷ್ಮೀಕಾಂತ ನಾಟೇಕರ, ಪುರಸಭೆ ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಭರತ ಸಿದ್ಧಾ ಕಲವಾಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ:</strong> ‘ಮಕ್ಕಳು ಮನೆಯಲ್ಲಿ ಪಾಲಕರ ಮತ್ತು ಶಾಲೆಯಲ್ಲಿ ಶಿಕ್ಷಕರ ನಡೆ, ನುಡಿಯನ್ನು ಅನುಕರಿಸುತ್ತಾರೆ. ಹೀಗಾಗಿ ಪಾಲಕರು, ಶಿಕ್ಷಕರ ನಡೆ, ನುಡಿಗಳು ವಿದ್ಯಾರ್ಥಿಗಳಿಗೆ ಮಾದರಿ ಆಗುವಂತೆ ಇರಬೇಕು’ ಎಂದು ಸಂಸದ ಸಾಗರ ಖಂಡ್ರೆ ಹೇಳಿದರು.</p>.<p>ಪಟ್ಟಣದ ಲಕ್ಷ್ಮಿಬಾಯಿ ಖಂಡ್ರೆ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಪಠ್ಯ ಚಟುವಟಿಕೆಗಳಿಗೆ ನೀಡುವಷ್ಟೇ ಮಹತ್ವವನ್ನು ಸಹಪಠ್ಯ ಚಟುವಟಿಕೆಗಳಿಗೂ ನೀಡಬೇಕು’ ಎಂದು ತಿಳಿಸಿದರು.</p>.<p>ಶಿಕ್ಷಣ ತಜ್ಞ ಗುರುರಾಜ ಕರಜಗಿ ಮಾತನಾಡಿ, ‘ಮಕ್ಕಳಿಗೆ ನಿರ್ಜೀವ ವಸ್ತುಗಳ(ಮೊಬೈಲ್, ಟಿ.ವಿ) ಜೊತೆ ಸ್ನೇಹವಾದಾಗ ಬಂಧಗಳು ದೂರವಾಗುತ್ತವೆ. ಹೀಗಾಗಿ, ಮಕ್ಕಳನ್ನು ಮೊಬೈಲ್ ಗೀಳಿನಿಂದ ದೂರ ಮಾಡಬೇಕು. ಅವರಲ್ಲಿ ಮೌಲ್ಯ ಬಿತ್ತುವ ಕಾರ್ಯ ಮಾಡಬೇಕು’ ಎಂದು ಹೇಳಿದರು.</p>.<p>ಶಿಕ್ಷಣ ಸಂಸ್ಥೆಯ ಪ್ರಾಚಾರ್ಯ ಸಂತೋಷ ಮಿರಾಜಕರ, ವಿದ್ಯಾರ್ಥಿಗಳಾದ ಸೀಮಾರಾಣಿ ಸಂದೀಪ, ಸಬೀನಾರಾಣಿ ಸಾಗರ ಮಾತನಾಡಿದರು.</p>.<p>ಇದೇ ವೇಳೆ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಢೋಲೆ, ಪ್ರಾಚಾರ್ಯ ಉದಯಕುಮಾರ ಕಲ್ಯಾಣೆ, ಸಂತೋಷಕುಮಾರ ತೀರ್ಥೆ, ಭೀಮರಾವ ಗಿರಿ, ಲಕ್ಷ್ಮೀಕಾಂತ ನಾಟೇಕರ, ಪುರಸಭೆ ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಭರತ ಸಿದ್ಧಾ ಕಲವಾಡಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>