<p><strong>ಹುಲಸೂರ</strong>: ಸಮೀಪದ ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಬಾಳೆಹಣ್ಣು ವಿತರಿಸಲಾಗಿದೆ ಎಂದು ಆರೋಪಿಸಿ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿ ನಡೆದ ಪಾಲಕರ ಸಭೆಯ ಮರುದಿನ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಯಿತು. ಮಧ್ಯಾಹ್ನದ ಊಟದ ಜೊತೆಗೆ ನೀಡಲಾಗುತ್ತಿರುವ ಬಾಳೆಹಣ್ಣುಗಳು ಹಾಳಾಗಿರುವುದು ಹಾಗೂ ತಿನ್ನಲು ಯೋಗ್ಯವಾಗಿಲ್ಲವೆಂದು ಕೆಲವರು ದೂರಿದರು. ಮಕ್ಕಳ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಪಾಲಕರು ಒತ್ತಾಯಿಸಿದರು.</p>.<p>‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಹಣ್ಣು ವಿತರಿಸಲಾಗುತ್ತಿದೆ. ಆದರೆ ಕಳಪೆ ಗುಣಮಟ್ಟದ ಹಣ್ಣು ನೀಡುವುದು ಆತಂಕಕಾರಿ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಕೆಲ ಪಾಲಕರು ಆಗ್ರಹಿಸಿದರು.</p>.<p>ಈ ಕುರಿತು ಶಾಲಾ ಮುಖ್ಯಶಿಕ್ಷಕ ಸೋಮನಾಥ ಬಿರಾದಾರ ಪ್ರತಿಕ್ರಿಯಿಸಿ, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಪಾಲಕರು ಗುಣಮಟ್ಟದ ಆಹಾರ ವಿತರಣೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಅಗತ್ಯವಿದೆ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಲಸೂರ</strong>: ಸಮೀಪದ ಭಾಲ್ಕಿ ತಾಲ್ಲೂಕಿನ ಸಾಯಗಾಂವ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಬಾಳೆಹಣ್ಣು ವಿತರಿಸಲಾಗಿದೆ ಎಂದು ಆರೋಪಿಸಿ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.</p>.<p>ಶಾಲೆಯಲ್ಲಿ ನಡೆದ ಪಾಲಕರ ಸಭೆಯ ಮರುದಿನ ಈ ವಿಷಯ ತೀವ್ರ ಚರ್ಚೆಗೆ ಗ್ರಾಸವಾಯಿತು. ಮಧ್ಯಾಹ್ನದ ಊಟದ ಜೊತೆಗೆ ನೀಡಲಾಗುತ್ತಿರುವ ಬಾಳೆಹಣ್ಣುಗಳು ಹಾಳಾಗಿರುವುದು ಹಾಗೂ ತಿನ್ನಲು ಯೋಗ್ಯವಾಗಿಲ್ಲವೆಂದು ಕೆಲವರು ದೂರಿದರು. ಮಕ್ಕಳ ಆರೋಗ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಪಾಲಕರು ಒತ್ತಾಯಿಸಿದರು.</p>.<p>‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಹಣ್ಣು ವಿತರಿಸಲಾಗುತ್ತಿದೆ. ಆದರೆ ಕಳಪೆ ಗುಣಮಟ್ಟದ ಹಣ್ಣು ನೀಡುವುದು ಆತಂಕಕಾರಿ. ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು’ ಎಂದು ಕೆಲ ಪಾಲಕರು ಆಗ್ರಹಿಸಿದರು.</p>.<p>ಈ ಕುರಿತು ಶಾಲಾ ಮುಖ್ಯಶಿಕ್ಷಕ ಸೋಮನಾಥ ಬಿರಾದಾರ ಪ್ರತಿಕ್ರಿಯಿಸಿ, ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.</p>.<p>ಪಾಲಕರು ಗುಣಮಟ್ಟದ ಆಹಾರ ವಿತರಣೆಗೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ಅಗತ್ಯವಿದೆ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>