<p><strong>ಬೀದರ್:</strong> ಇಲ್ಲಿಯ ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಪಾಲಕರನ್ನು ಗೌರವಿಸಿ ಸಂಸ್ಕೃತಿ ಉಳಿಸಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲಕರ ಪಾದಪೂಜೆ ಮಾಡಿದರು.</p>.<p>ಶಾಲೆಗೆ ತಂದೆ-ತಾಯಿಯನ್ನು ಕರೆದುಕೊಂಡು ಬಂದಿದ್ದ ವಿದ್ಯಾರ್ಥಿಗಳು ಅವರನ್ನು ಕುರ್ಚಿ ಮೇಲೆ ಕೂರಿಸಿ, ಪಾದ ತೊಳೆದು, ಪುಷ್ಪ ಅರ್ಪಿಸಿ ನಮಸ್ಕರಿಸಿದರು. ಸಂಸ್ಥೆ ಪ್ರಮುಖರು ಶಾಲು ಹೊದಿಸಿ ಪಾಲಕರನ್ನು ಗೌರವಿಸಿದರು.</p>.<p>ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ‘ಮಕ್ಕಳು ಮೊಬೈಲ್ ನಂಟು ಹೆಚ್ಚು ಬೆಳೆಸಿಕೊಳ್ಳುತ್ತಿದ್ದಾರೆ. ಸಂಸ್ಕೃತಿ ಮರೆಯುತ್ತಿದ್ದಾರೆ.<br />ಅವರಿಗೆ ಸರಿಯಾದ ಮಾರ್ಗ ತೋರುವುದು ಪಾಲಕರು ಹಾಗೂ ಶಿಕ್ಷಕರ ಕರ್ತವ್ಯವಾಗಿದೆ’ ಎಂದು ಹೇಳಿದರು.</p>.<p>‘ಮಕ್ಕಳಿಗೆ ಬಾಲ್ಯದಿಂದಲೇ ಒಳ್ಳೆಯ ಸಂಸ್ಕಾರ ಕೊಡಬೇಕು. ಉತ್ತಮ ನಾಗರಿಕನಿಗೆ ಅಗತ್ಯವಾದ ಗುಣಗಳನ್ನು ಬೆಳೆಸಬೇಕು. ಮಕ್ಕಳು ನಿತ್ಯ ಪಾಲಕರನ್ನು ವಂದಿಸಿ, ಆಶೀರ್ವಾದ ಪಡೆದುಕೊಳ್ಳಬೇಕು. ಹಾಗಾದಲ್ಲಿ ಮಾತ್ರ ದೇಶದ ಶ್ರೇಷ್ಠ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<p>‘ಪಾಲಕರನ್ನು ಗೌರವಿಸಿ ಸಂಸ್ಕೃತಿ ಉಳಿಸಿ’ ಶೀರ್ಷಿಕೆಯಡಿ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅನೇಕ ಪಾಲಕರು, ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಲಾಗುತ್ತಿದೆ ಎಂದು ಹೇಳಿದರು.</p>.<p>ಶಾಲೆ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಇಲ್ಲಿಯ ಗುರುನಾನಕ ಪಬ್ಲಿಕ್ ಶಾಲೆಯಲ್ಲಿ ನಡೆದ ‘ಪಾಲಕರನ್ನು ಗೌರವಿಸಿ ಸಂಸ್ಕೃತಿ ಉಳಿಸಿ’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪಾಲಕರ ಪಾದಪೂಜೆ ಮಾಡಿದರು.</p>.<p>ಶಾಲೆಗೆ ತಂದೆ-ತಾಯಿಯನ್ನು ಕರೆದುಕೊಂಡು ಬಂದಿದ್ದ ವಿದ್ಯಾರ್ಥಿಗಳು ಅವರನ್ನು ಕುರ್ಚಿ ಮೇಲೆ ಕೂರಿಸಿ, ಪಾದ ತೊಳೆದು, ಪುಷ್ಪ ಅರ್ಪಿಸಿ ನಮಸ್ಕರಿಸಿದರು. ಸಂಸ್ಥೆ ಪ್ರಮುಖರು ಶಾಲು ಹೊದಿಸಿ ಪಾಲಕರನ್ನು ಗೌರವಿಸಿದರು.</p>.<p>ಸಂಸ್ಥೆಯ ಉಪಾಧ್ಯಕ್ಷೆ ರೇಷ್ಮಾ ಕೌರ್ ಮಾತನಾಡಿ, ‘ಮಕ್ಕಳು ಮೊಬೈಲ್ ನಂಟು ಹೆಚ್ಚು ಬೆಳೆಸಿಕೊಳ್ಳುತ್ತಿದ್ದಾರೆ. ಸಂಸ್ಕೃತಿ ಮರೆಯುತ್ತಿದ್ದಾರೆ.<br />ಅವರಿಗೆ ಸರಿಯಾದ ಮಾರ್ಗ ತೋರುವುದು ಪಾಲಕರು ಹಾಗೂ ಶಿಕ್ಷಕರ ಕರ್ತವ್ಯವಾಗಿದೆ’ ಎಂದು ಹೇಳಿದರು.</p>.<p>‘ಮಕ್ಕಳಿಗೆ ಬಾಲ್ಯದಿಂದಲೇ ಒಳ್ಳೆಯ ಸಂಸ್ಕಾರ ಕೊಡಬೇಕು. ಉತ್ತಮ ನಾಗರಿಕನಿಗೆ ಅಗತ್ಯವಾದ ಗುಣಗಳನ್ನು ಬೆಳೆಸಬೇಕು. ಮಕ್ಕಳು ನಿತ್ಯ ಪಾಲಕರನ್ನು ವಂದಿಸಿ, ಆಶೀರ್ವಾದ ಪಡೆದುಕೊಳ್ಳಬೇಕು. ಹಾಗಾದಲ್ಲಿ ಮಾತ್ರ ದೇಶದ ಶ್ರೇಷ್ಠ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ಸಾಧ್ಯವಿದೆ’ ಎಂದು ತಿಳಿಸಿದರು.</p>.<p>‘ಪಾಲಕರನ್ನು ಗೌರವಿಸಿ ಸಂಸ್ಕೃತಿ ಉಳಿಸಿ’ ಶೀರ್ಷಿಕೆಯಡಿ ಕಾರ್ಯಕ್ರಮ ಹಮ್ಮಿಕೊಂಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅನೇಕ ಪಾಲಕರು, ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಲಾಗುತ್ತಿದೆ ಎಂದು ಹೇಳಿದರು.</p>.<p>ಶಾಲೆ ಸಿಬ್ಬಂದಿ, ಪಾಲಕರು ಹಾಗೂ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>