ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್ | ‘ಪತ್ರಿಕಾ ಭವನ ನಿರ್ಮಾಣಕ್ಕೆ ₹10 ಲಕ್ಷ’

Last Updated 26 ಜೂನ್ 2022, 6:27 IST
ಅಕ್ಷರ ಗಾತ್ರ

ಹುಮನಾಬಾದ್: ‘ಬೀದರ್ ನಗರದಲ್ಲಿ ನಿರ್ಮಾಣವಾಗುತ್ತಿರುವ ಪತ್ರಿಕಾ ಭವನಕ್ಕೆ ₹10 ಲಕ್ಷ ಅನುದಾನ ನೀಡಲಾಗುವುದು’ ಎಂದು ವಿಧಾನ ಪರಿಷತ್ ಸದಸ್ಯ ಭೀಮರಾವ್ ಪಾಟೀಲ ಭರವಸೆ ನೀಡಿದರು.

ಪಟ್ಟಣದ ಗೃಹ ಕಚೇರಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕರಂಜಿ ಮಾತನಾಡಿ,‘ಜಿಲ್ಲೆಯಲ್ಲಿ ಪತ್ರಿಕಾಗೋಷ್ಠಿಗಳನ್ನು ಖಾಸಗಿ ಹೋಟೆ ಲ್‌ಗಳಲ್ಲಿ ನಡೆಸಲಾಗುತ್ತಿದೆ. ಇದರಿಂದ ಖರ್ಚು ಹೆಚ್ಚಾಗುತ್ತಿದೆ’ ಎಂದರು.

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಶ್ರೀನಿವಾಸ ಚೌಧರಿ, ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಪತ್ರಕರ್ತರಾದ ಸಂಜು ಕುಮಾರ್ ಜುನ್ನಾ, ದುರ್ಯೋಧನ ಹೂಗಾರ, ರಮೇಶ ರೆಡ್ಡಿ, ಶೈಲೇಂದ್ರ ಕಾವಡಿ, ವೆಂಕಟೇಶ ಜಾಧವ, ರಾಜೂ ಪೂಜಾರಿ, ದಿಲೀಪ್ ಮೇತ್ರೆ, ಸೈಯದ್ ರಿಜ್ವಾನ್, ಪ್ರಶಾಂತ್, ಶರಣು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT