ವಂದೇ ಮಾತರಂ ಶಾಲೆಯ ನಿರ್ದೇಶಕ ಶಿವಾನಂದ ದಾಡಗೆ ವಿಶೇಷ ಉಪನ್ಯಾಸ ನೀಡಿದರು. ಪ್ರಥಮ ದರ್ಜೆ ಗುತ್ತಿಗೆದಾರ ಚನ್ನಬಸವ ಬಳತೆ ಜಿ.ಪಿ.ರಾಜರತ್ನಂ ವಿರಚಿತ ಸ್ವತಂತ್ರ ಭಾರತದ ಅಶೋಕ ಚಕ್ರ ಧ್ವಜ ಗ್ರಂಥ ಲೋಕಾರ್ಪಣೆಗೊಳಿಸಿದರು.ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಸಂಸ್ಥೆಯ ನಿರ್ದೇಶಕ ಸೋಮನಾಥಪ್ಪ ಅಷ್ಟೂರೆ, ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ ಮೊಳಕೀರೆ ಇದ್ದರು. ಲಕ್ಷ್ಮೀಬಾಯಿ ಸಿದ್ದಬಟ್ಟೆ ಅವರ ವಿಶೇಷ ಸನ್ಮಾನ ಜರುಗಿತು. ಶಾಲಾ, ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ಮಲ್ಲಗಂಬ, ಸಾಂಸ್ಕೃತಿಕ ಕಾರ್ಯಕ್ರಮಗಳು ನೆರೆದವರ ಮನ ಸೆಳೆದವು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಮಧುಕರ ಗಾಂವ್ಕರ್ ವಂದಿಸಿದರು.