<p><strong>ಬೀದರ್: </strong>ಚನ್ನಬಸವ ಪಟ್ಟದ್ದೇವರು ಆದರ್ಶ ಗುರುವಾಗಿದ್ದರು ಎಂದು ಉದ್ಯಮಿ ಜೈರಾಜ್ ಖಂಡ್ರೆ ನುಡಿದರು.</p>.<p>ಇಲ್ಲಿಯ ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ ಚನ್ನಬಸವ ಪಟ್ಟದ್ದೇವರ 22ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಯಕ, ದಾಸೋಹ ಸೇರಿದಂತೆ ಬಸವಾದಿ ಶರಣರ ತತ್ವಗಳನ್ನು ಜೀವನದುದ್ದಕ್ಕೂ ಚಾಚೂತಪ್ಪದೇ ಪಾಲಿಸಿಕೊಂಡು ಬಂದಿದ್ದರು ಎಂದು ತಿಳಿಸಿದರು.</p>.<p>ಪ್ರಸಾದ ನಿಲಯದ ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಮಾತನಾಡಿ, ಪಟ್ಟದ್ದೇವರು ನಿಜಾಮನ ಆಳ್ವಿಕೆಯಲ್ಲಿ ಹೊರಗೆ ಉರ್ದು ಫಲಕ ಹಾಕಿ ಒಳಗೆ ಕನ್ನಡ ಕಲಿಸಿದ್ದರು ಎಂದು ಸ್ಮರಿಸಿದರು.</p>.<p>ಪ್ರೊ. ಉಮಾಕಾಂತ ಮೀಸೆ ಮಾತನಾಡಿ, ಪಟ್ಟದ್ದೇವರ ನಡೆ-ನುಡಿ ಒಂದೇ ಆಗಿತ್ತು. ಅಸಂಖ್ಯಾತ ಬಡ ಮಕ್ಕಳಿಗೆ ಅವರು ಅನ್ನ, ಅಕ್ಷರ ದಾಸೋಹ ಮಾಡಿದ್ದರು ಎಂದು ಹೇಳಿದರು.</p>.<p>ಶಾಂತಾ ಖಂಡ್ರೆ ಅವರು ಬಸವಣ್ಣ ಹಾಗೂ ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಶಾಮರಾವ್ ಡೊಂಗರಗೆ, ಗೀತಾ ಶಾಂತಕುಮಾರ, ಬಂಡೆಪ್ಪ ಗುನ್ನಳ್ಳಿ, ಶಿವಶಂಕರ, ಅಶೋಕ, ಶ್ರೀನಿವಾಸ ಬಚ್ಚಾ, ಸತ್ಯನಾರಾಯಣ ಇದ್ದರು. ಶ್ರೀಕಾಂತ ಸ್ವಾಮಿ ನಿರೂಪಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಚನ್ನಬಸವ ಪಟ್ಟದ್ದೇವರು ಆದರ್ಶ ಗುರುವಾಗಿದ್ದರು ಎಂದು ಉದ್ಯಮಿ ಜೈರಾಜ್ ಖಂಡ್ರೆ ನುಡಿದರು.</p>.<p>ಇಲ್ಲಿಯ ಚನ್ನಬಸವ ಪಟ್ಟದ್ದೇವರು ಪ್ರಸಾದ ನಿಲಯದಲ್ಲಿ ನಡೆದ ಚನ್ನಬಸವ ಪಟ್ಟದ್ದೇವರ 22ನೇ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಕಾಯಕ, ದಾಸೋಹ ಸೇರಿದಂತೆ ಬಸವಾದಿ ಶರಣರ ತತ್ವಗಳನ್ನು ಜೀವನದುದ್ದಕ್ಕೂ ಚಾಚೂತಪ್ಪದೇ ಪಾಲಿಸಿಕೊಂಡು ಬಂದಿದ್ದರು ಎಂದು ತಿಳಿಸಿದರು.</p>.<p>ಪ್ರಸಾದ ನಿಲಯದ ವ್ಯವಸ್ಥಾಪಕ ಶ್ರೀಕಾಂತ ಸ್ವಾಮಿ ಮಾತನಾಡಿ, ಪಟ್ಟದ್ದೇವರು ನಿಜಾಮನ ಆಳ್ವಿಕೆಯಲ್ಲಿ ಹೊರಗೆ ಉರ್ದು ಫಲಕ ಹಾಕಿ ಒಳಗೆ ಕನ್ನಡ ಕಲಿಸಿದ್ದರು ಎಂದು ಸ್ಮರಿಸಿದರು.</p>.<p>ಪ್ರೊ. ಉಮಾಕಾಂತ ಮೀಸೆ ಮಾತನಾಡಿ, ಪಟ್ಟದ್ದೇವರ ನಡೆ-ನುಡಿ ಒಂದೇ ಆಗಿತ್ತು. ಅಸಂಖ್ಯಾತ ಬಡ ಮಕ್ಕಳಿಗೆ ಅವರು ಅನ್ನ, ಅಕ್ಷರ ದಾಸೋಹ ಮಾಡಿದ್ದರು ಎಂದು ಹೇಳಿದರು.</p>.<p>ಶಾಂತಾ ಖಂಡ್ರೆ ಅವರು ಬಸವಣ್ಣ ಹಾಗೂ ಪಟ್ಟದ್ದೇವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.</p>.<p>ಶಾಮರಾವ್ ಡೊಂಗರಗೆ, ಗೀತಾ ಶಾಂತಕುಮಾರ, ಬಂಡೆಪ್ಪ ಗುನ್ನಳ್ಳಿ, ಶಿವಶಂಕರ, ಅಶೋಕ, ಶ್ರೀನಿವಾಸ ಬಚ್ಚಾ, ಸತ್ಯನಾರಾಯಣ ಇದ್ದರು. ಶ್ರೀಕಾಂತ ಸ್ವಾಮಿ ನಿರೂಪಿಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>