<p><strong>ಭಾಲ್ಕಿ</strong>: ಡಾ.ಬಸವಲಿಂಗ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಜತೆಗೆ ಸಾಮಾಜಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ವಿಶಿಷ್ಟ ಸೇವೆ ಅನನ್ಯವಾದದ್ದು. ಬರದ ನಾಡಲ್ಲಿ ಶೈಕ್ಷಣಿಕ ಕ್ರಾಂತಿಗೈದಿರುವುದು ಅಭಿನಂದನಾರ್ಹ ಕಾರ್ಯ ಎಂದು ಜ್ಞಾನಯೋಗಿ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಕರಡ್ಯಾಳದ ಚನ್ನಬಸ ವೇಶ್ವರ ಗುರುಕುಲದಲ್ಲಿ ಬುಧವಾರ ವಸತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ನಿಸರ್ಗದ ಪರಿಸರದಲ್ಲಿ ಸುಂದರ ಕಟ್ಟಡ ನಿರ್ಮಾಣವಾಗಿದ್ದು, ಈ ಭಾಗವನ್ನು ಜ್ಞಾನ ಹಾಗೂ ಅನುಭಾವದ ಕ್ಷೇತ್ರವನ್ನಾಗಿಸಿದ ಕೀರ್ತಿ ಪಟ್ಟದ್ದೇವರಿಗೆ ಸಲ್ಲುತ್ತದೆ. ಗುರುಕುಲ ಪರಿಸರದಲ್ಲಿ ಸುಮ್ಮನೇ ಕೂತರೇ ಸಾಕು ಮನಸ್ಸು ಸಂತೃಪ್ತಗೊಳ್ಳುತ್ತದೆ. ಇಲ್ಲಿ ಆಸೆ, ಆಮಿಷಗಳಿಗೆ ಅವಕಾಶ ಇಲ್ಲ. ಎಲ್ಲರ ತ್ಯಾಗದ ಫಲವಾಗಿ ಶಿಕ್ಷಣ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಸುತ್ತೂರು-ಮೈಸೂರು ವೀರಸಿಂಹಾಸನ ಮಠದ ಜಗದ್ಗುರು ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ಡಾ.ಚನ್ನಬಸವ ಪಟ್ಟದ್ದೇವರು ಈ ಭಾಗದಲ್ಲಿ ಶ್ರೇಷ್ಠ ಬದುಕು ನಡೆಸಿದ್ದರು. ನಿಜಾಮನ ಕಾಲದಲ್ಲಿ ಕನ್ನಡ ಕಲಿಸಲು ಹಿಂದೆ ಮುಂದೆ ನೋಡುತ್ತಿದ್ದಂತಹ ಪರಿಸ್ಥಿಯಲ್ಲಿ ಪಟ್ಟದ್ದೇವರು ಕನ್ನಡ ಕಲಿಸುವುದರ ಜತೆಗೆ ಎಲ್ಲ ವರ್ಗದ ಜನರನ್ನು ಸಮನಾಗಿ ಕಂಡಿರುವುದು ಶ್ರೇಷ್ಠವೆನಿಸುತ್ತದೆ’ ಎಂದರು.</p>.<p>‘ಅವರು ಧಾರ್ಮಿಕ ಪ್ರಚಾರ, ಪ್ರಸಾರದ ಜತೆಗೆ ಬಸವಕಲ್ಯಾಣ ನೂತನ ಅನುಭವ ಮಂಟಪ ಕಟ್ಟಿದರ ಪರಿಣಾಮ ಬಸವಕಲ್ಯಾಣ ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದೆ’ ಎಂದು ತಿಳಿಸಿದರು.</p>.<p>ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ನಾನು ಮಠಕ್ಕೆ ಮರೀ ಆಗಬೇಕು ಎಂದು ಬಂದವನಲ್ಲ. ಬಡತನದ ಹಿನ್ನೆಲೆಯಲ್ಲಿ ಓದಿಗೆ ಮಠಕ್ಕೆ ಬಂದಿದ್ದೆ. ಪಟ್ಟದ್ದೇವರ ಆಶಯದಂತೆ ಶ್ರೀಮಠದ ಪೀಠಾಧಿಪತಿ ಆಗಿದ್ದೇನೆ’ ಎಂದರು.</p>.<p>‘ಪಟ್ಟದ್ದೇವರು ಯಾವುದೇ ಆಸ್ತಿ, ಅಂತಸ್ತು, ಸಂಸ್ಥೆ, ಬ್ಯಾಂಕ್ ಬ್ಯಾಲೆನ್ಸ್ ಬಿಟ್ಟು ಹೋಗಿರಲಿಲ್ಲ. ಆದರೆ ಅವರ ದಿವ್ಯಶಕ್ತಿ, ಆಶೀರ್ವಾದದ ಪರಿಣಾಮ ಎಲ್ಲ ಕಾರ್ಯಗಳು ಯಶಸ್ವಿ ಆಗುತ್ತಿವೆ. ಶಿಕ್ಷಣ ಸಂಸ್ಥೆಯ ಬೆಳವಣಿಗೆ ಹಿಂದೆ ಶಿಕ್ಷಕರ, ಪೋಷಕರ ಕೊಡುಗೆಯು ದೊಡ್ಡದಿದೆ’ ಎಂದು ತಿಳಿಸಿದರು.</p>.<p>ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಡಾ.ಬಸವಲಿಂಗ ಪಟ್ಟದ್ದೇವರು 1992ರಲ್ಲಿ ಗ್ರಾಮೀಣ ಭಾಗದಲ್ಲಿ ಆರಂಭಿಸಿದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಹೆಮ್ಮರವಾಗಿ ಬೆಳೆಯುತ್ತಿದೆ’ ಎಂದು ತಿಳಿಸಿದರು.</p>.<p>ಬೆಂಗಳೂರು ಕೇಂದ್ರ ಅಪರಾಧ ವಿಭಾಗ ಮುಖ್ಯಸ್ಥ ಸಂದೀಪ ಪಾಟೀಲ ಮಾತನಾಡಿದರು. ಮಾಜಿ ಶಾಸಕ ಪ್ರಕಾಶ ಖಂಡ್ರೆ, ಯುವ ಮುಖಂಡ ಸಾಗರ ಈಶ್ವರ ಖಂಡ್ರೆ, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಇದ್ದರು.</p>.<p>ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿ ದರು. ಆಡಳಿತಾಧಿಕಾರಿ ಮೋಹನ ರೆಡ್ಡಿ ಸ್ವಾಗತಿಸಿದರು ಮಧುಕರ್ ಗಾಂವಕರ್ ನಿರೂಪಿಸಿದರು.</p>.<p class="Briefhead"><strong>ಬಸವಣ್ಣ ಮೂರ್ತಿ ಅನಾವರಣ:</strong></p>.<p>ವಸತಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನೂತನ ಕಟ್ಟಡದ ಮುಂಭಾಗದಲ್ಲಿ ಪ್ರತಿಷ್ಠಾಪನೆ ಮಾಡಿರುವ ವಿಶ್ವಗುರು ಬಸವಣ್ಣನವರ, ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿಯನ್ನು ಬೆಂಗಳೂರು ತರಳಬಾಳು ಕೇಂದ್ರದ ಸಿದ್ಧಯ್ಯನವರು ಅನಾವರಣಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ಡಾ.ಬಸವಲಿಂಗ ಪಟ್ಟದ್ದೇವರು ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಜತೆಗೆ ಸಾಮಾಜಿಕ, ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ವಿಶಿಷ್ಟ ಸೇವೆ ಅನನ್ಯವಾದದ್ದು. ಬರದ ನಾಡಲ್ಲಿ ಶೈಕ್ಷಣಿಕ ಕ್ರಾಂತಿಗೈದಿರುವುದು ಅಭಿನಂದನಾರ್ಹ ಕಾರ್ಯ ಎಂದು ಜ್ಞಾನಯೋಗಿ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಹೇಳಿದರು.</p>.<p>ತಾಲ್ಲೂಕಿನ ಕರಡ್ಯಾಳದ ಚನ್ನಬಸ ವೇಶ್ವರ ಗುರುಕುಲದಲ್ಲಿ ಬುಧವಾರ ವಸತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾತನಾಡಿದರು.</p>.<p>ನಿಸರ್ಗದ ಪರಿಸರದಲ್ಲಿ ಸುಂದರ ಕಟ್ಟಡ ನಿರ್ಮಾಣವಾಗಿದ್ದು, ಈ ಭಾಗವನ್ನು ಜ್ಞಾನ ಹಾಗೂ ಅನುಭಾವದ ಕ್ಷೇತ್ರವನ್ನಾಗಿಸಿದ ಕೀರ್ತಿ ಪಟ್ಟದ್ದೇವರಿಗೆ ಸಲ್ಲುತ್ತದೆ. ಗುರುಕುಲ ಪರಿಸರದಲ್ಲಿ ಸುಮ್ಮನೇ ಕೂತರೇ ಸಾಕು ಮನಸ್ಸು ಸಂತೃಪ್ತಗೊಳ್ಳುತ್ತದೆ. ಇಲ್ಲಿ ಆಸೆ, ಆಮಿಷಗಳಿಗೆ ಅವಕಾಶ ಇಲ್ಲ. ಎಲ್ಲರ ತ್ಯಾಗದ ಫಲವಾಗಿ ಶಿಕ್ಷಣ ಸಂಸ್ಥೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು.</p>.<p>ಸುತ್ತೂರು-ಮೈಸೂರು ವೀರಸಿಂಹಾಸನ ಮಠದ ಜಗದ್ಗುರು ಡಾ.ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ‘ಡಾ.ಚನ್ನಬಸವ ಪಟ್ಟದ್ದೇವರು ಈ ಭಾಗದಲ್ಲಿ ಶ್ರೇಷ್ಠ ಬದುಕು ನಡೆಸಿದ್ದರು. ನಿಜಾಮನ ಕಾಲದಲ್ಲಿ ಕನ್ನಡ ಕಲಿಸಲು ಹಿಂದೆ ಮುಂದೆ ನೋಡುತ್ತಿದ್ದಂತಹ ಪರಿಸ್ಥಿಯಲ್ಲಿ ಪಟ್ಟದ್ದೇವರು ಕನ್ನಡ ಕಲಿಸುವುದರ ಜತೆಗೆ ಎಲ್ಲ ವರ್ಗದ ಜನರನ್ನು ಸಮನಾಗಿ ಕಂಡಿರುವುದು ಶ್ರೇಷ್ಠವೆನಿಸುತ್ತದೆ’ ಎಂದರು.</p>.<p>‘ಅವರು ಧಾರ್ಮಿಕ ಪ್ರಚಾರ, ಪ್ರಸಾರದ ಜತೆಗೆ ಬಸವಕಲ್ಯಾಣ ನೂತನ ಅನುಭವ ಮಂಟಪ ಕಟ್ಟಿದರ ಪರಿಣಾಮ ಬಸವಕಲ್ಯಾಣ ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿದೆ’ ಎಂದು ತಿಳಿಸಿದರು.</p>.<p>ಡಾ.ಬಸವಲಿಂಗ ಪಟ್ಟದ್ದೇವರು ಮಾತನಾಡಿ, ‘ನಾನು ಮಠಕ್ಕೆ ಮರೀ ಆಗಬೇಕು ಎಂದು ಬಂದವನಲ್ಲ. ಬಡತನದ ಹಿನ್ನೆಲೆಯಲ್ಲಿ ಓದಿಗೆ ಮಠಕ್ಕೆ ಬಂದಿದ್ದೆ. ಪಟ್ಟದ್ದೇವರ ಆಶಯದಂತೆ ಶ್ರೀಮಠದ ಪೀಠಾಧಿಪತಿ ಆಗಿದ್ದೇನೆ’ ಎಂದರು.</p>.<p>‘ಪಟ್ಟದ್ದೇವರು ಯಾವುದೇ ಆಸ್ತಿ, ಅಂತಸ್ತು, ಸಂಸ್ಥೆ, ಬ್ಯಾಂಕ್ ಬ್ಯಾಲೆನ್ಸ್ ಬಿಟ್ಟು ಹೋಗಿರಲಿಲ್ಲ. ಆದರೆ ಅವರ ದಿವ್ಯಶಕ್ತಿ, ಆಶೀರ್ವಾದದ ಪರಿಣಾಮ ಎಲ್ಲ ಕಾರ್ಯಗಳು ಯಶಸ್ವಿ ಆಗುತ್ತಿವೆ. ಶಿಕ್ಷಣ ಸಂಸ್ಥೆಯ ಬೆಳವಣಿಗೆ ಹಿಂದೆ ಶಿಕ್ಷಕರ, ಪೋಷಕರ ಕೊಡುಗೆಯು ದೊಡ್ಡದಿದೆ’ ಎಂದು ತಿಳಿಸಿದರು.</p>.<p>ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಡಾ.ಬಸವಲಿಂಗ ಪಟ್ಟದ್ದೇವರು 1992ರಲ್ಲಿ ಗ್ರಾಮೀಣ ಭಾಗದಲ್ಲಿ ಆರಂಭಿಸಿದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಹೆಮ್ಮರವಾಗಿ ಬೆಳೆಯುತ್ತಿದೆ’ ಎಂದು ತಿಳಿಸಿದರು.</p>.<p>ಬೆಂಗಳೂರು ಕೇಂದ್ರ ಅಪರಾಧ ವಿಭಾಗ ಮುಖ್ಯಸ್ಥ ಸಂದೀಪ ಪಾಟೀಲ ಮಾತನಾಡಿದರು. ಮಾಜಿ ಶಾಸಕ ಪ್ರಕಾಶ ಖಂಡ್ರೆ, ಯುವ ಮುಖಂಡ ಸಾಗರ ಈಶ್ವರ ಖಂಡ್ರೆ, ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಇದ್ದರು.</p>.<p>ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕ ಮಾತನಾಡಿ ದರು. ಆಡಳಿತಾಧಿಕಾರಿ ಮೋಹನ ರೆಡ್ಡಿ ಸ್ವಾಗತಿಸಿದರು ಮಧುಕರ್ ಗಾಂವಕರ್ ನಿರೂಪಿಸಿದರು.</p>.<p class="Briefhead"><strong>ಬಸವಣ್ಣ ಮೂರ್ತಿ ಅನಾವರಣ:</strong></p>.<p>ವಸತಿ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ನೂತನ ಕಟ್ಟಡದ ಮುಂಭಾಗದಲ್ಲಿ ಪ್ರತಿಷ್ಠಾಪನೆ ಮಾಡಿರುವ ವಿಶ್ವಗುರು ಬಸವಣ್ಣನವರ, ಡಾ.ಚನ್ನಬಸವ ಪಟ್ಟದ್ದೇವರ ಮೂರ್ತಿಯನ್ನು ಬೆಂಗಳೂರು ತರಳಬಾಳು ಕೇಂದ್ರದ ಸಿದ್ಧಯ್ಯನವರು ಅನಾವರಣಗೊಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>