<p><strong>ಭಾಲ್ಕಿ</strong>: ಲಿಂ.ಡಾ.ಚನ್ನಬಸವ ಪಟ್ಟದ್ದೇವರು ದೀನ-ದಲಿತರಿಗೆ, ಶೋಷಿತರಿಗೆ ಸಮಾನತೆಯ ಬದುಕನ್ನು ನೀಡಿ ಮಾನವತಾ ಸಾಮ್ರಾಜ್ಯ ನಿರ್ಮಿಸಿದ್ದರು ಎಂದು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ.ನಾಗಶೆಟ್ಟಿ ಬಿರಾದಾರ ಹೇಳಿದರು.</p>.<p>ಪಟ್ಟಣದ ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಟ್ಟದೇವರ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಗಡಿಭಾಗದ ಬೀದರ್ ಜಿಲ್ಲೆಯಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಶಿಕ್ಷಣ ನೀಡಿ ಈ ಭಾಗ ಸುಧಾರಿಸಲು ಪ್ರಯತ್ನಿಸಿದ್ದರು. ಕರ್ನಾಟಕ ಏಕೀಕರಣ ಚಳವಳಿಯಲ್ಲಿ ತಮ್ಮ ಶಿಷ್ಯರಾದ ಲೋಕನಾಯಕ ಭೀಮಣ್ಣಾ ಖಂಡ್ರೆ ಜೊತೆ ಪಾಲ್ಗೊಂಡು ಈ ಭಾಗವನ್ನು ಕರ್ನಾಟಕದಲ್ಲಿ ಸೇರಿಸಿದ್ದರು’ ಎಂದರು.</p>.<p>‘ಪಟ್ಟದ್ದೇವರು ಬಸವತತ್ವದ ವಿಚಾರಧಾರೆಗಳನ್ನು ಮನೆಮನೆಗೆ ಮುಟ್ಟಿಸಿದ ವಿಭೂತಿ ಪುರುಷರಾಗಿದ್ದರು’ ಎಂದು ಹೇಳಿದರು.</p>.<p>ಬಿಕೆಐಟಿ ಉಪ ಪ್ರಾಚಾರ್ಯ ಪಿ.ಎನ್.ದಿವಾಕರ್, ಅಕ್ಕಮಹಾದೇವಿ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಂಕುಶ ಢೋಲೆ ಮಾತನಾಡಿದರು.</p>.<p>ಸಿ.ಬಿ.ಕಾಲೇಜಿನ ಪ್ರಾಚಾರ್ಯ ಸೂರ್ಯಕಾಂತ ಧನ್ಯೆ, ಅಕ್ಕಮಹಾದೇವಿ ಪ್ರೌಢಶಾಲೆಯ ಮುಖ್ಯಶಿಕ್ಷಕ ರೇವಣಸಿದ್ದಪ್ಪಾ ದ್ಯಾಸಾ, ಪ್ರಮುಖರಾದ ಕಮಲಾ ಸಿರ್ಸೆ, ಮೀನಾ ಪಾಟೀಲ, ಸೋಮನಾಥ ಮೂಲಗೆ, ವಿಜಯಕುಮಾರ ಬರದಾಪುರೆ, ಸಂಗ್ರಾಮ ಮುದಾಳೆ, ಅಶೋಕಕುಮಾರ ಹಲಕೂಡೆ, ರಾಜಕುಮಾರ ಬೆಲ್ದಾಳೆ, ಗುರುನಾಥ ಸೈನೀರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾಲ್ಕಿ</strong>: ಲಿಂ.ಡಾ.ಚನ್ನಬಸವ ಪಟ್ಟದ್ದೇವರು ದೀನ-ದಲಿತರಿಗೆ, ಶೋಷಿತರಿಗೆ ಸಮಾನತೆಯ ಬದುಕನ್ನು ನೀಡಿ ಮಾನವತಾ ಸಾಮ್ರಾಜ್ಯ ನಿರ್ಮಿಸಿದ್ದರು ಎಂದು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ಆಡಳಿತಾಧಿಕಾರಿ ಡಾ.ನಾಗಶೆಟ್ಟಿ ಬಿರಾದಾರ ಹೇಳಿದರು.</p>.<p>ಪಟ್ಟಣದ ಶಾಂತಿ ವರ್ಧಕ ಶಿಕ್ಷಣ ಸಂಸ್ಥೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಪಟ್ಟದೇವರ ಸ್ಮರಣೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಗಡಿಭಾಗದ ಬೀದರ್ ಜಿಲ್ಲೆಯಲ್ಲಿ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸಿ ಸಾವಿರಾರು ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಶಿಕ್ಷಣ ನೀಡಿ ಈ ಭಾಗ ಸುಧಾರಿಸಲು ಪ್ರಯತ್ನಿಸಿದ್ದರು. ಕರ್ನಾಟಕ ಏಕೀಕರಣ ಚಳವಳಿಯಲ್ಲಿ ತಮ್ಮ ಶಿಷ್ಯರಾದ ಲೋಕನಾಯಕ ಭೀಮಣ್ಣಾ ಖಂಡ್ರೆ ಜೊತೆ ಪಾಲ್ಗೊಂಡು ಈ ಭಾಗವನ್ನು ಕರ್ನಾಟಕದಲ್ಲಿ ಸೇರಿಸಿದ್ದರು’ ಎಂದರು.</p>.<p>‘ಪಟ್ಟದ್ದೇವರು ಬಸವತತ್ವದ ವಿಚಾರಧಾರೆಗಳನ್ನು ಮನೆಮನೆಗೆ ಮುಟ್ಟಿಸಿದ ವಿಭೂತಿ ಪುರುಷರಾಗಿದ್ದರು’ ಎಂದು ಹೇಳಿದರು.</p>.<p>ಬಿಕೆಐಟಿ ಉಪ ಪ್ರಾಚಾರ್ಯ ಪಿ.ಎನ್.ದಿವಾಕರ್, ಅಕ್ಕಮಹಾದೇವಿ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಅಂಕುಶ ಢೋಲೆ ಮಾತನಾಡಿದರು.</p>.<p>ಸಿ.ಬಿ.ಕಾಲೇಜಿನ ಪ್ರಾಚಾರ್ಯ ಸೂರ್ಯಕಾಂತ ಧನ್ಯೆ, ಅಕ್ಕಮಹಾದೇವಿ ಪ್ರೌಢಶಾಲೆಯ ಮುಖ್ಯಶಿಕ್ಷಕ ರೇವಣಸಿದ್ದಪ್ಪಾ ದ್ಯಾಸಾ, ಪ್ರಮುಖರಾದ ಕಮಲಾ ಸಿರ್ಸೆ, ಮೀನಾ ಪಾಟೀಲ, ಸೋಮನಾಥ ಮೂಲಗೆ, ವಿಜಯಕುಮಾರ ಬರದಾಪುರೆ, ಸಂಗ್ರಾಮ ಮುದಾಳೆ, ಅಶೋಕಕುಮಾರ ಹಲಕೂಡೆ, ರಾಜಕುಮಾರ ಬೆಲ್ದಾಳೆ, ಗುರುನಾಥ ಸೈನೀರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>