ಈ ಕುರಿತು ಚರ್ಚಿಸಲು ಮೇ 29ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿ ಸಭೆಗೆ ಸಂಸದ ಭಗವಂತ ಖೂಬಾ, ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ, ಬಸವಕಲ್ಯಾಣ ಶಾಸಕ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ, ರಘುನಾಥರಾವ್ ಮಲ್ಕಾಪೂರೆ ಬಂದಿದ್ದರು. ಆದರೆ ಕಾರ್ಖಾನೆಗಳ ಅಧ್ಯಕ್ಷರು ಕೋವಿಡ್ ಹಾಗೂ ಜ್ವರದ ಕಾರಣ ನೀಡಿ ಗೈರಾಗಿದ್ದರಿಂದ ಸಭೆಯನ್ನು ಮುಂದೂಡಲಾಗಿದೆ ಎಂದು ಹೇಳಿದ್ದಾರೆ.