ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯರನಳ್ಳಿ ಪಿಡಿಒ ಅಮಾನತು

Last Updated 27 ಜುಲೈ 2018, 16:19 IST
ಅಕ್ಷರ ಗಾತ್ರ

ಬೀದರ್: ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಬೀದರ್ ತಾಲ್ಲೂಕಿನ ಯರನಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜ್ಞಾನು ರಾಮಚಂದ್ರ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಸಿಇಒ ಆರ್‌.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ವಸತಿ ಯೋಜನೆಗಳ ಜಿಪಿಎಸ್‌ ಮಾಡಿಲ್ಲ. ಬಿಆರ್‌ಜಿಎಫ್‌ ಅಡಿಯಲ್ಲಿ ವಿತರಿಸಲಾದ ಮೊಬೈಲ್‌ ಫೋನ್‌ ಕಳೆದರೂ ಮಾಹಿತಿ ನೀಡಿಲ್ಲ. ಗ್ರಾಮ ಪಂಚಾಯಿತಿ ಸಭೆಗಳನ್ನು ನಿಯಮಿತವಾಗಿ ಕರೆದಿಲ್ಲ. ಕಚೇರಿಯಲ್ಲಿ ಕಂಪ್ಯೂಟರ್‌ ಆಪರೇಟರ್‌ ಇದ್ದರೂ ಏಜೆನ್ಸಿಯ ಮೂಲಕ ಕೆಲಸ ಮಾಡಿಸಿ ಪಂಚಾಯಿತಿಯಿಂದ ವೆಚ್ಚ ಭರಿಸಿದ್ದಾರೆ ಎನ್ನುವ ಆರೋಪಗಳು ಅವರ ಮೇಲೆ ಇವೆ. ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಜ್ಞಾನು ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT