ಹುಮನಾಬಾದ್ ಕಡೆಯಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಲಾರಿಯಲ್ಲಿ ಅಕ್ಕಿ ಸಾಗಿಸುತ್ತಿದ್ದಾಗ ಸಸ್ತಾಪುರ ಬಂಗ್ಲಾ ಹತ್ತಿರದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಅಕ್ಕಿ ಹಾಗೂ ಲಾರಿಯನ್ನು ಜಪ್ತಿ ಮಾಡಿಕೊಂಡು ಚಾಲಕ ಅವಿನಾಶ ಧೂಳೆ ಎನ್ನುವವನನ್ನು ಬಂಧಿಸಿದ್ದಾರೆ. ಅಕ್ಕಿಯು ರೂ 750,000 ಮೌಲ್ಯದ್ದಾಗಿದ್ದು ಯಾದಗಿರಿಯಿಂದ ಮುಂಬೈಗೆ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.