‘ನಾಗರಿಕರು ಆರೋಗ್ಯ ಸಂರಕ್ಷಣೆಗೆ ಪ್ರಥಮ ಆದ್ಯತೆ ನೀಡಬೇಕು. ಎಲ್ಲರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸಭೆ, ಸಮಾರಂಭ, ಮದುವೆ ಇತರ ಕಾರ್ಯಕ್ರಮದಲ್ಲಿ ಜನ ಸೇರದಂತೆ ನೋಡಿಕೊಳ್ಳಬೇಕು. ವೈಯಕ್ತಿಕ ಅಂತರ ಕಾಯ್ದುಕೊಂಡು, ಮುಖಗವಸು ಧರಿಸಿ ನಿತ್ಯದ ಕಾಯಕ ಮಾಡಬೇಕು’ ಎಂದು ತಹಶೀಲ್ದಾರ್ ಜಿಯಾವುಲ್ಲ ಸಲಹೆ ನೀಡಿದ್ದಾರೆ.