ಭಾಲ್ಕಿ: ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಾರ್ವಜನಿಕರ ಕುಂದು-ಕೊರತೆಗೆ ಸ್ಪಂದಿಸುತ್ತಿಲ್ಲ. ಕಚೇರಿಗೆ ಒಂದು ವಾರದಿಂದ ಗೈರು ಆಗಿದ್ದಾರೆ. ಕಚೇರಿಯಲ್ಲಿ ಹೆಚ್ಚಿನ ಸಮಯ ಕಳೆಯದೆ ಇರುವುದರಿಂದ ಜನರಿಗೆ ತುಂಬಾ ತೊಂದರೆ ಆಗುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ಪ್ಯಾಂಥರ್ನ ಪ್ರಮುಖರು ಆಗ್ರಹಿಸಿದ್ದಾರೆ.
ಕಚೇರಿಗೆ ಬರದೆ ಮನೆಗೆ ಪಿಡಿಒಗಳನ್ನು ಕರೆಸಿಕೊಂಡು ಸಭೆ ನಡೆಸಿ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ.
ಸಾರ್ವಜನಿಕರ ಹಿತದೃಷ್ಟಿಯಿಂದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಬರೆದ ಪತ್ರದಲ್ಲಿ ಕೈಲಾಶ ಭಾವಿಕಟ್ಟೆ, ಮಾರುತಿ ಭಾವಿಕಟ್ಟೆ, ಮನೋಹರ ಮೋರೆ ಒತ್ತಾಯಿಸಿದ್ದಾರೆ.