ಪುರಸಭೆ ಮಾಜಿ ಸದಸ್ಯ ಸುಭಾಷ ಕುಂಬಾರ ಮಾತನಾಡಿ,‘ಪಟ್ಟಣ ತಾಲ್ಲೂಕು ಕೇಂದ್ರವಾಗಿದ್ದು, ಮುಂದಿನ ದಿನಗಳಲ್ಲಿ ಆಸ್ಪತ್ರೆಯಲ್ಲಿ ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿ ಅವರ ವಸತಿ ಗೃಹಗಳ ನಿರ್ಮಾಣಕ್ಕೆ ಸ್ಥಳ ಬೇಕಾಗುತ್ತದೆ. ಆಸ್ಪತ್ರೆ ಆವರಣದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸುವುದು ಕಾನೂನಿಗೆ ವಿರುದ್ಧವಾಗಿದೆ’ ಎಂದರು.