<p><strong>ಕಮಲನಗರ: </strong>ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಜನ ಮಾತ್ರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಪ್ರತಿದಿನ ಸಮಯ ನಿಗದಿ ಮಾಡಿದ್ದರೂ ಜನ ಸುರಕ್ಷಿತ ಅಂತರ ಮರೆತು ಮುಗಿಬೀಳುತ್ತಿದ್ದಾರೆ.</p>.<p>ಸುರಕ್ಷಿತ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಿ ಎಂದರೂ ಜನ ಮಾತ್ರ ಅದಕ್ಕೆ ತಲೆಕೆಡಿಸಿಕೊಳ್ಳದೇ ಎಲ್ಲೆಂದರಲ್ಲಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಇದು ಕೋವಿಡ್ ಹೆಚ್ಚಾಗಲು ಕಾರಣವಾಗುತ್ತಿದೆ.</p>.<p>ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಕರ್ಫ್ಯೂ ಕುರಿತು ಮಾಹಿತಿ ನೀಡುತ್ತಿದ್ದರೂ ಜನ ಚಿತ್ತ ಹರಿಸುತ್ತಿಲ್ಲ.</p>.<p>ಸರ್ಕಾರ ಯಾವುದೇ ಕಾನೂನು ಜಾರಿಗೆ ತಂದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ಕೊರೊನಾ ಸೋಂಕು ತಡೆಗಟ್ಟುವುದು ಕಷ್ಟ ಸಾಧ್ಯ ಎಂಬುದನ್ನು ಸಾರ್ವಜನಿಕರೇ ಮನವರಿಕೆ ಮಾಡಿಕೊಳ್ಳಬೇಕಾಗಿದೆ. ಇದೀಗ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಈ ರೀತಿ ಓಡಾಡಿದರೆ ಏನು ಗತಿ ಎಂದು ಹಿರಿಯರು ಆತಂಕ ವ್ಯಕ್ತಪಡಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ: </strong>ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಜನ ಮಾತ್ರ ನಿಯಮಗಳನ್ನು ಗಾಳಿಗೆ ತೂರುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗೆ ಪ್ರತಿದಿನ ಸಮಯ ನಿಗದಿ ಮಾಡಿದ್ದರೂ ಜನ ಸುರಕ್ಷಿತ ಅಂತರ ಮರೆತು ಮುಗಿಬೀಳುತ್ತಿದ್ದಾರೆ.</p>.<p>ಸುರಕ್ಷಿತ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಕೆ ಮಾಡಿ ಎಂದರೂ ಜನ ಮಾತ್ರ ಅದಕ್ಕೆ ತಲೆಕೆಡಿಸಿಕೊಳ್ಳದೇ ಎಲ್ಲೆಂದರಲ್ಲಿ ಓಡಾಡುತ್ತಿರುವುದು ಕಂಡುಬರುತ್ತಿದೆ. ಇದು ಕೋವಿಡ್ ಹೆಚ್ಚಾಗಲು ಕಾರಣವಾಗುತ್ತಿದೆ.</p>.<p>ಗ್ರಾಮ ಪಂಚಾಯಿತಿ ಹಾಗೂ ಪೊಲೀಸ್ ಇಲಾಖೆ ಕರ್ಫ್ಯೂ ಕುರಿತು ಮಾಹಿತಿ ನೀಡುತ್ತಿದ್ದರೂ ಜನ ಚಿತ್ತ ಹರಿಸುತ್ತಿಲ್ಲ.</p>.<p>ಸರ್ಕಾರ ಯಾವುದೇ ಕಾನೂನು ಜಾರಿಗೆ ತಂದರೂ ಸಾರ್ವಜನಿಕರು ಎಚ್ಚೆತ್ತುಕೊಳ್ಳದಿದ್ದರೆ ಕೊರೊನಾ ಸೋಂಕು ತಡೆಗಟ್ಟುವುದು ಕಷ್ಟ ಸಾಧ್ಯ ಎಂಬುದನ್ನು ಸಾರ್ವಜನಿಕರೇ ಮನವರಿಕೆ ಮಾಡಿಕೊಳ್ಳಬೇಕಾಗಿದೆ. ಇದೀಗ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನ ಈ ರೀತಿ ಓಡಾಡಿದರೆ ಏನು ಗತಿ ಎಂದು ಹಿರಿಯರು ಆತಂಕ ವ್ಯಕ್ತಪಡಿಸುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>