ಔರಾದ್: ತಾಲ್ಲೂಕಿನ ನಾಗೂರ (ಬಿ) ಗ್ರಾಮದ ಬಸ್ ಸೌಲಭ್ಯ ಸ್ಥಗಿತವಾಗಿ ಪ್ರಯಾಣಿಕರು ಪರದಾಡಬೇಕಿದೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ಸೂಚನೆ ಮೇರೆಗೆ ಕಳೆದ ಫೆಬ್ರುವರಿ ತಿಂಗಳಲ್ಲಿ ಈ ಊರಿಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಇಲ್ಲಿಯ ಘಟಕದಿಂದ ನಿತ್ಯ ನಾಲ್ಕು ಬಾರಿ ನಾಗೂರ ಗ್ರಾಮಕ್ಕೆ ಬಸ್ ಹೋಗಿ ಬರುತ್ತಿತ್ತು. ಆದರೆ, ಕಳೆದ ಒಂದು ತಿಂಗಳಿನಿಂದ ಬಸ್ ಸೌಲಭ್ಯ ಸ್ಥಗಿತ ಮಾಡಲಾಗಿದೆ ಎಂದು ಗ್ರಾಮದ ಮುಖಂಡ ಸಂತೋಷ ಮಸ್ಕಲೆ ತಿಳಿಸಿದ್ದಾರೆ.