ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷೆ ಸಾರಿಕಾ ಗಂಗಾ ಮಾತನಾಡಿ, ‘ಕೋವಿಡ್ ಸಂಕಷ್ಟದಲ್ಲಿ ಮಕ್ಕಳು ಶಾಲೆಯಿಂದ ದೂರ ಉಳಿಯುವ ಪರಿಸ್ಥಿತಿ ನಿರ್ಮಾಣ ಗೊಂಡಿತ್ತು. ಅವರಿಗೆ ಈ ಹೊಸ ಪರೀಕ್ಷಾ ವಿಧಾನದ ಕುರಿತು ಜಾಗೃತಿ ಮೂಡಿಸುವುದು ಅತಿ ಅವಶ್ಯಕವಾಗಿದ್ದು, ಈ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.