ಅವರು ಈ ಸಂಬಂಧ ನ.8 ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿ, ‘ಮಾಂಜ್ರಾ ನದಿ ದಡದ ಮೇಲಿರುವ ಚಕ್ರಕೋಟಿ ಬಾಯವ್ವ ಮಠ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇಲ್ಲಿ ನಿರಂತರವಾಗಿ ದಾಸೋಹ ಸೇವೆ ನಡೆಯುತ್ತದೆ. ಆದರೆ, ಸಮರ್ಪಕವಾದ ರಸ್ತೆ ಇಲ್ಲ. ನಿರಂತರ ವಿದ್ಯುತ್ ವ್ಯವಸ್ಥೆಯೂ ಇಲ್ಲ. ಭಕ್ತರಿಗೆ ತೊಂದರೆಯಾಗುತ್ತಿದೆ. ಅಲ್ಲದೆ, ಕಾಕನಾಳದ ಐತಿಹಾಸಿಕ ಸೋಮೇಶ್ವರ ದೇವಸ್ಥಾನಕ್ಕೂ ಮೂಲ ಸೌಕರ್ಯ ಇಲ್ಲ. ರಸ್ತೆ ನಿರ್ಮಿಸಿ, ನಿರಂತರ ವಿದ್ಯುತ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದ್ದರು.