‘ಸಹಕಾರ ಸಂಸ್ಥೆಗಳ ಮೂಲಕ ಕೃಷಿ ಸಾಲ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಮಾತ್ರವಲ್ಲ ಸ್ಥಳೀಯ ಸಣ್ಣ ಉದ್ಯಮಿಗಳಿಗೆ ಸಾಲ ನೀಡುವ ಯೋಜನೆಗಳನ್ನೂ ಜಾರಿಗೊಳಿಸಲಾಗುತ್ತಿದೆ. ಆಡಳಿತ ಮಂಡಳಿ ಸದಸ್ಯರು ಸಂಸ್ಥೆಯ ಸರ್ವತೋಮುಖ ಏಳಿಗೆಗಾಗಿ ಪಾರದರ್ಶಕವಾಗಿ ಕಾರ್ಯನಿರ್ವಹಿಸುವ ಅಗತ್ಯವಿದೆ’ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಚನ್ನಬಸಯ್ಯ ಸ್ವಾಮಿ ಮಾತನಾಡಿ, ‘ಸಹಕಾರ ರಂಗದಲ್ಲಿ ಇಂದು ನುರಿತ ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಬದಲಾವಣೆಗೆ ಅನುಗುಣವಾಗಿ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುವ ಕೆಲಸವನ್ನು ಆಡಳಿತ ಮಂಡಳಿ ಸದಸ್ಯರು ಮಾಡಬೇಕು’ ಎಂದು ಹೇಳಿದರು.