ಸಂಗೊಳ್ಳಿ ರಾಯಣ್ಣ ಅವರು 1796 ರ ಆಗಸ್ಟ್ 15 ರಂದು ಜನಿಸಿದ್ದರು. 1831 ರ ಜನವರಿ 26 ರಂದು ಅವರನ್ನು ಗಲ್ಲಿಗೆ ಏರಿಸಲಾಗಿತ್ತು. ಹೀಗಾಗಿ ಸ್ವಾತಂತ್ರ್ಯೋತ್ಸವ ಹಾಗೂ ಗಣರಾಜ್ಯೋತ್ಸವ ದಿನ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವಿಸುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.