ಬೀದರ್: ಬೀದರ್ ಯುವ ಚೇತನ ಅಭಿವೃದ್ದಿ ಸಂಘ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ನಗರದ ಹಾರೂರಗೇರಿ ಬಡಾವಣೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ 10 ಸಸಿಗಳನ್ನು ನೆಡಲಾಯಿತು.
ಸಂಘದ ಅಧ್ಯಕ್ಷ ಪ್ರದೀಪ ಕಾಂಬಳೆ ಮಾತನಾಡಿ, ‘ಸಮಾಜದ ಸ್ವಾಸ್ಥ್ಯಕ್ಕಾಗಿ ಗಿಡಮರಗಳನ್ನು ಬೆಳೆಸಬೇಕಿದೆ. ಪರಿಸರ ಸಂರಕ್ಷಣೆ ಮಾಡಬೇಕಿದೆ’ ಎಂದರು.