ಘಟನೆಗೆ ಕಾರಣರಾದ ಗೋಣಿಬೀಡಿನ ಪಿಎಸ್ಐ ಅರ್ಜುನ ಅವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು. ವಿಜಯಪುರ ಜಿಲ್ಲೆಯ ಬಸವನಬಾಗೆವಾಡಿಯಲ್ಲಿ ನಡೆದ ಇಬ್ಬರು ದಲಿತ ಬಾಲಕಿಯರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳ ಆರೋಪಿಗಳನ್ನು ಬಂಧಿಸಬೇಕು. ಚಾಮರಾಜನಗರ ಆಸ್ಪತ್ರೆಯಲ್ಲಿ 37 ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ತನಿಖಾ ಸಮಿತಿ ವರದಿ ನೀಡಿದ ಕಾರಣ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಸುಧಾಕರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಆಸ್ಪತ್ರೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ. 10 ಲಕ್ಷ ಪರಿಹಾರ ಕಲ್ಪಿಸಬೇಕು. ಲಾಕ್ಡೌನ್ನಿಂದ ಸಂಕಷ್ಟಕ್ಕೆ ಒಳಗಾಗಿರುವ ಪರಿಶಿಷ್ಟ ಜಾತಿ, ವರ್ಗಗಳ ಬಡವರಿಗೆ ಎಸ್ಸಿಪಿ, ಟಿಎಪ್ಪಿ ಅನುದಾನದ ಅಡಿ ಹಾಗೂ ಎಲ್ಲ ಸಮುದಾಯಗಳ ಬಡ ಕುಟುಂಬಗಳಿಗೆ ಮಾಸಿಕ ಕನಿಷ್ಠ ರೂ. 15 ಸಾವಿರ ಆರ್ಥಿಕ ನೆರವು ನೀಡಬೇಕು. ಎಸ್ಸಿಪಿ, ಟಿಎಸ್ಪಿ ಅನುದಾನದ ದುರ್ಬಳಕೆ ಹಾಗೂ ಅವ್ಯವಹಾರದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.