<p><strong>ಬೀದರ್:</strong> ಛತ್ರಪತಿ ಶಿವಾಜಿ ಮಹಾರಾಜರ ಕುರಿತು ನಗರದ ಕರ್ನಾಟಕ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣದ ಅಂಗವಾಗಿ ನಡೆದ ಕವಿಗೋಷ್ಠಿಯು ಶಿವಾಜಿಯವರ ಜೀವನದ ಮೇಲೆ ಬೆಳಕು ಚೆಲ್ಲಿತು.</p>.<p>ಜೀಜಾಬಾಯಿ ಪ್ರಭಾವ, ಗೆರಿಲ್ಲಾ ಯುದ್ಧ, ಸೌಹಾರ್ದ, ಸ್ತ್ರೀಯರ ಗೌರವ, ಪರಧರ್ಮ ಸಹಿಷ್ಣು ಎಂಬುದನ್ನು ಕವಿತೆಗಳು ಸಾರಿದವು.</p>.<p>ಸಾಹಿತಿ ಸುನಿತಾ ಕೂಡ್ಲಿಕರ್ ಮಾತನಾಡಿ, ಕವಿತೆಗಳಲ್ಲಿ ಶಿವಾಜಿಯ ಖಡ್ಗದರ್ಶನ, ಹಿಂದವಿ ಸಾಮ್ರಾಜ್ಯ ಸ್ಥಾಪನೆಯ ಜನಕ, ಶಿವನೇರಿಕೋಟೆಯ ಶೂರ, ಸೇನಾನಾಯಕನ ಧೈರ್ಯ ಮುಂತಾದವುಗಳ ಮೇಲೆ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿವೆ. ಕವಿತೆಗಳು ಸಾಧಕರ ಜೀವನದ ಆದರ್ಶಗಳನ್ನು ಮುಂದಿನ ಯುವ ಪೀಳಿಗೆಗೆ ತಿಳಿಸಿಕೊಡುತ್ತವೆ ಎಂದರು.</p>.<p>ಕವಿಗೋಷ್ಠಿಯ ಅಧ್ಯಕ್ಷತೆ ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ ವಹಿಸಿದ್ದರು. ಬಸವರಾಜ ಬಿರಾದಾರ, ರವೀಂದ್ರ ಲಂಜವಾಡಕರ, ದಿಲೀಪ್ ಮಾಲೆ, ಮಲ್ಲಮ್ಮ ಸಂತಾಜಿ, ಶ್ರೇಯಾ ಮಹೀಂದ್ರಕರ್, ಗೀತಾ ಪೋಸ್ತೆ, ಲಕ್ಷ್ಮೀ ಕುಂಬಾರ್ ಕವನ ವಾಚಿಸಿದರು. ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಹಾಜರಿದ್ದರು.</p>.<p>ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ಬೆಂಗಳೂರು, ಕರ್ನಾಟಕ ಸಾಹಿತ್ಯ ಸಂಘ, ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆಗಳ ವಿಶ್ವವಿದ್ಯಾಲಯ ಬೀದರ್ ಹಾಗೂ ಕರ್ನಾಟಕ ಕಾಲೇಜಿನ ಇತಿಹಾಸ ವಿಭಾಗದ ಸಂಯುಕ್ತಾಶ್ರಯದಲ್ಲಿ ವಿಚಾರ ಸಂಕಿರಣ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಛತ್ರಪತಿ ಶಿವಾಜಿ ಮಹಾರಾಜರ ಕುರಿತು ನಗರದ ಕರ್ನಾಟಕ ಕಾಲೇಜಿನಲ್ಲಿ ಏರ್ಪಡಿಸಿದ್ದ ವಿಚಾರ ಸಂಕಿರಣದ ಅಂಗವಾಗಿ ನಡೆದ ಕವಿಗೋಷ್ಠಿಯು ಶಿವಾಜಿಯವರ ಜೀವನದ ಮೇಲೆ ಬೆಳಕು ಚೆಲ್ಲಿತು.</p>.<p>ಜೀಜಾಬಾಯಿ ಪ್ರಭಾವ, ಗೆರಿಲ್ಲಾ ಯುದ್ಧ, ಸೌಹಾರ್ದ, ಸ್ತ್ರೀಯರ ಗೌರವ, ಪರಧರ್ಮ ಸಹಿಷ್ಣು ಎಂಬುದನ್ನು ಕವಿತೆಗಳು ಸಾರಿದವು.</p>.<p>ಸಾಹಿತಿ ಸುನಿತಾ ಕೂಡ್ಲಿಕರ್ ಮಾತನಾಡಿ, ಕವಿತೆಗಳಲ್ಲಿ ಶಿವಾಜಿಯ ಖಡ್ಗದರ್ಶನ, ಹಿಂದವಿ ಸಾಮ್ರಾಜ್ಯ ಸ್ಥಾಪನೆಯ ಜನಕ, ಶಿವನೇರಿಕೋಟೆಯ ಶೂರ, ಸೇನಾನಾಯಕನ ಧೈರ್ಯ ಮುಂತಾದವುಗಳ ಮೇಲೆ ಬೆಳಕು ಚೆಲ್ಲುವಲ್ಲಿ ಯಶಸ್ವಿಯಾಗಿವೆ. ಕವಿತೆಗಳು ಸಾಧಕರ ಜೀವನದ ಆದರ್ಶಗಳನ್ನು ಮುಂದಿನ ಯುವ ಪೀಳಿಗೆಗೆ ತಿಳಿಸಿಕೊಡುತ್ತವೆ ಎಂದರು.</p>.<p>ಕವಿಗೋಷ್ಠಿಯ ಅಧ್ಯಕ್ಷತೆ ಹಿರಿಯ ಸಾಹಿತಿ ಎಂ.ಜಿ. ದೇಶಪಾಂಡೆ ವಹಿಸಿದ್ದರು. ಬಸವರಾಜ ಬಿರಾದಾರ, ರವೀಂದ್ರ ಲಂಜವಾಡಕರ, ದಿಲೀಪ್ ಮಾಲೆ, ಮಲ್ಲಮ್ಮ ಸಂತಾಜಿ, ಶ್ರೇಯಾ ಮಹೀಂದ್ರಕರ್, ಗೀತಾ ಪೋಸ್ತೆ, ಲಕ್ಷ್ಮೀ ಕುಂಬಾರ್ ಕವನ ವಾಚಿಸಿದರು. ಕರ್ನಾಟಕ ಸಾಹಿತ್ಯ ಸಂಘದ ಅಧ್ಯಕ್ಷ ಜಗನ್ನಾಥ ಹೆಬ್ಬಾಳೆ ಹಾಜರಿದ್ದರು.</p>.<p>ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮ ಬೆಂಗಳೂರು, ಕರ್ನಾಟಕ ಸಾಹಿತ್ಯ ಸಂಘ, ಕರ್ನಾಟಕ ಪಶು ವೈದ್ಯಕೀಯ ಪಶು ಹಾಗೂ ಮೀನುಗಾರಿಕೆಗಳ ವಿಶ್ವವಿದ್ಯಾಲಯ ಬೀದರ್ ಹಾಗೂ ಕರ್ನಾಟಕ ಕಾಲೇಜಿನ ಇತಿಹಾಸ ವಿಭಾಗದ ಸಂಯುಕ್ತಾಶ್ರಯದಲ್ಲಿ ವಿಚಾರ ಸಂಕಿರಣ ಹಾಗೂ ಕವಿಗೋಷ್ಠಿ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>