ಬೀದರ್: ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಏಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ನಿವೃತ್ತ ಪಿ.ಎಸ್.ಐ. ನಾಗನಾಥ ಆಗಮಿಸುವರು. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್ ತಿಳಿಸಿದ್ದಾರೆ.
* * *
ಕುಟುಂಬದಲ್ಲಿ ಶಾಂತಿ ಅಗತ್ಯ
ಬೀದರ್: ಕುಟುಂಬದಲ್ಲಿ ಶಾಂತಿ ನೆಲೆಸಿದಲ್ಲಿ ಮಾತ್ರ ಕರ್ತವ್ಯದಲ್ಲಿ ಶ್ರೇಷ್ಠ ಹಾಗೂ ಗುಣಮಟ್ಟ ಕಾಪಾಡಿಕೊಳ್ಳಲು ಸಾಧ್ಯವಿದೆ ಎಂದು ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಬಿ.ಜಿ.ಶೆಟಕಾರ್ ನುಡಿದರು.
ಕರ್ನಾಟಕ ಕಾಲೇಜಿನಲ್ಲಿ 37 ವರ್ಷ ಸೇವೆ ಸಲ್ಲಿಸಿ ವಯೋನಿವರತ್ತಿ ಹೊಂದಿರುವ ಪ್ರೊ.ಎಸ್.ಪಿ ಜನವಾಡಕರ್ ಬೀಳ್ಕೊಡುವ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರಾಚಾರ್ಯ ಮಲ್ಲಿಕಾರ್ಜುನ್ ಹಂಗರಗಿ ಅಧ್ಯಕ್ಷತೆ ವಹಿಸಿದ್ದರು. ಸನ್ಮಾನ ಸ್ವೀಕರಿಸಿದ ಪ್ರೊ.ಜನವಾಡಕರ್ ಮಾತನಾಡಿದರು.
ಉಪ ಪ್ರಾಚಾರ್ಯ ಅನಿಲಕುಮಾರ ಚಿಕಮಣೂರ್, ರಾಜೇಂದ್ರ ಬಿರಾದಾರ, ಜಗನ್ನಾತ ಹೆಬ್ಬಾಳೆ, ಎಂ.ಎಸ್ ಚಲ್ವಾ, ಡಿ.ಬಿ ಕಂಬಾರ, ಶ್ವೇತಾ ಪಾಟೀಲ ಇದ್ದರು. ಲಕ್ಷ್ಮೀ ಕುಂಬಾರ ಕಾರ್ಯಕ್ರಮ ನಿರೂಪಿಸಿದರು. ಜ್ಯೋತಿ ಪಾಟೀಲ ವಂದಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.