<p><strong>ಬೆಂಗಳೂರು:</strong> ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಟ್ಯಾನರಿ ರಸ್ತೆಯಲ್ಲಿ ಹಮ್ಮಿಕೊಂಡ ಅನಿರ್ದಿಷ್ಟ ಅವಧಿ ಪ್ರತಿಭಟನೆ ಸೋಮವಾರವೂ ಮುಂದುವರಿದಿದ್ದು, ಪ್ರತಿಭಟನೆ ಮುಕ್ತಾಯಗೊಳಿಸದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<p>‘ಪ್ರತಿಭಟನಕಾರರ ಜೊತೆ ಮಾತುಕತೆ ನಡೆಸಿ, ಮುಕ್ತಾಯಗೊಳಿಸುವಂತೆ ಮನವೊಲಿಸುತ್ತೇವೆ. ಮಾತು ಕೇಳದಿದ್ದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ’ ಎಂದು ಕೆ.ಜಿ. ಹಳ್ಳಿ ಪೊಲೀಸರು ಹೇಳಿದರು.</p>.<p>ಸಂಜೆ 5 ಗಂಟೆ ವೇಳೆಗೆ ಪ್ರತಿಭಟನೆ ಮುಕ್ತಾಯಗೊಳಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಹೀಗಾಗಿ, ಪ್ರತಿಭಟನಕಾರರಿಗೆ ಶಾಮಿಯಾನ ಒದಗಿಸಿದವರಿಗೆ ಮತ್ತು ಆಡಿಯೊ ಸಾಧನಗಳನ್ನು ನೀಡಿದವರ ಮೇಲೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಭಟನನಿರತರು ದೂರಿದರು.</p>.<p>‘ಪ್ರದೇಶದಲ್ಲಿ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವುದರಿಂದ ಶಾಮಿಯಾನ ತೆರವುಗೊಳಿಸುವಂತೆ ಪೊಲೀಸರು ತಿಳಿಸಿದ್ದಾರೆ. ಮೂರು ದಿನ ಪ್ರತಿಭಟನೆ ನಡೆಸುವುದಾಗಿ ಸುತ್ತಮುತ್ತಲಿನ ಅಂಗಡಿ ಮಾಲೀಕರು, ಉದ್ಯಮಿಗಳ ಬಳಿ ತಿಳಿಸಿದ್ದೆವು. ಕೆಲವು ದಿನಗಳ ಬಳಿಕ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಶಾಮಿಯಾನದ ಮಾಲೀಕ ಇಮ್ರಾನ್ ತಿಳಿಸಿದರು.</p>.<p>ಶನಿವಾರ ಪ್ರತಿಭಟನೆ ಆರಂಭಗೊಂಡಿದ್ದು, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಮೂರು ದಿನ ಪ್ರತಿಭಟನೆ ಹಮ್ಮಿಕೊಳ್ಳಲು ಮೊದಲು ನಿರ್ಧರಿಸಿದ್ದರೂ, ಸ್ಥಳೀಯರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದರಿಂದ ಅನಿರ್ದಿಷ್ಟ ಅವಧಿಗೆ ಮುಂದುವರಿಸಲು ಆಯೋಜಕರು ಉದ್ದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಟ್ಯಾನರಿ ರಸ್ತೆಯಲ್ಲಿ ಹಮ್ಮಿಕೊಂಡ ಅನಿರ್ದಿಷ್ಟ ಅವಧಿ ಪ್ರತಿಭಟನೆ ಸೋಮವಾರವೂ ಮುಂದುವರಿದಿದ್ದು, ಪ್ರತಿಭಟನೆ ಮುಕ್ತಾಯಗೊಳಿಸದಿದ್ದರೆ ಕ್ರಮ ತೆಗೆದುಕೊಳ್ಳುವುದಾಗಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.</p>.<p>‘ಪ್ರತಿಭಟನಕಾರರ ಜೊತೆ ಮಾತುಕತೆ ನಡೆಸಿ, ಮುಕ್ತಾಯಗೊಳಿಸುವಂತೆ ಮನವೊಲಿಸುತ್ತೇವೆ. ಮಾತು ಕೇಳದಿದ್ದರೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ’ ಎಂದು ಕೆ.ಜಿ. ಹಳ್ಳಿ ಪೊಲೀಸರು ಹೇಳಿದರು.</p>.<p>ಸಂಜೆ 5 ಗಂಟೆ ವೇಳೆಗೆ ಪ್ರತಿಭಟನೆ ಮುಕ್ತಾಯಗೊಳಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ಹೀಗಾಗಿ, ಪ್ರತಿಭಟನಕಾರರಿಗೆ ಶಾಮಿಯಾನ ಒದಗಿಸಿದವರಿಗೆ ಮತ್ತು ಆಡಿಯೊ ಸಾಧನಗಳನ್ನು ನೀಡಿದವರ ಮೇಲೆ ಪೊಲೀಸರು ಒತ್ತಡ ಹೇರುತ್ತಿದ್ದಾರೆ ಎಂದು ಪ್ರತಿಭಟನನಿರತರು ದೂರಿದರು.</p>.<p>‘ಪ್ರದೇಶದಲ್ಲಿ ಸುಗಮ ಸಂಚಾರಕ್ಕೆ ಅಡ್ಡಿ ಉಂಟಾಗುತ್ತಿರುವುದರಿಂದ ಶಾಮಿಯಾನ ತೆರವುಗೊಳಿಸುವಂತೆ ಪೊಲೀಸರು ತಿಳಿಸಿದ್ದಾರೆ. ಮೂರು ದಿನ ಪ್ರತಿಭಟನೆ ನಡೆಸುವುದಾಗಿ ಸುತ್ತಮುತ್ತಲಿನ ಅಂಗಡಿ ಮಾಲೀಕರು, ಉದ್ಯಮಿಗಳ ಬಳಿ ತಿಳಿಸಿದ್ದೆವು. ಕೆಲವು ದಿನಗಳ ಬಳಿಕ ಮತ್ತೆ ಪ್ರತಿಭಟನೆ ಹಮ್ಮಿಕೊಳ್ಳುತ್ತೇವೆ’ ಎಂದು ಶಾಮಿಯಾನದ ಮಾಲೀಕ ಇಮ್ರಾನ್ ತಿಳಿಸಿದರು.</p>.<p>ಶನಿವಾರ ಪ್ರತಿಭಟನೆ ಆರಂಭಗೊಂಡಿದ್ದು, ಭಾನುವಾರ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ಮೂರು ದಿನ ಪ್ರತಿಭಟನೆ ಹಮ್ಮಿಕೊಳ್ಳಲು ಮೊದಲು ನಿರ್ಧರಿಸಿದ್ದರೂ, ಸ್ಥಳೀಯರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದರಿಂದ ಅನಿರ್ದಿಷ್ಟ ಅವಧಿಗೆ ಮುಂದುವರಿಸಲು ಆಯೋಜಕರು ಉದ್ದೇಶಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>