ಆಕಾಂಕ್ಷಿಗಳಾದ ಶರಣು ಸಲಗರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಗುಂಡುರೆಡ್ಡಿ ಮಾತ್ರ ಇಲ್ಲಿಗೆ ಯಾರೇ ಬಂದರೂ ಅಪಾರ ಬೆಂಬಲಿಗರ ಜತೆ ಭರ್ಜರಿಯಾಗಿ ಸ್ವಾಗತಿಸಿ ಶಕ್ತಿ ಪ್ರದರ್ಶಿಸಿದ್ದಾರೆ. ಈ ಐದು ತಿಂಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನಕುಮಾರ ಕಟೀಲ್, ಉಪಾಧ್ಯಕ್ಷ ವಿಜಯೇಂದ್ರ, ಸಚಿವರಾದ ವಿ.ಸೋಮಣ್ಣ, ಪ್ರಭು ಬಿ.ಚವಾಣ್ ನಾನಾ ಕಾರಣಗಳಿಂದ ಇಲ್ಲಿಗೆ ಬಂದಿದ್ದರು. ಆಗ ಈ ಇಬ್ಬರೂ ಎಲ್ಲರಗಿಂತ ಭಿನ್ನವಾದ ಚಟುವಟಿಕೆಗಳನ್ನು ಹಮ್ಮಿಕೊಂಡು ಎಲ್ಲರ ಗಮನ ಸೆಳೆದಿದ್ದರು.