<p><strong>ಔರಾದ್:</strong> ತಾಲ್ಲೂಕಿನ ಮಂಜ್ರಾ ನದಿ ಪಾತ್ರದ ಕೌಡಗಾಂವ, ಬಲ್ಲೂರ(ಜೆ) ಕೌಠಾ(ಕೆ), ಕೌಠಾ(ಬಿ), ಪಾಶಾಪೂರ, ಗಡಿಕುಶನೂರ ಸೇರಿದಂತೆ ವಿವಿಧ ಗ್ರಾಮಗಳ ರೈತರ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ರೈತರು ಗೋಳು ತೋಡಿಕೊಂಡರು.</p>.<p>ಈ ಬಾರಿ ಜಾಸ್ತಿ ಮಳೆ ಹಾಗೂ ನದಿ ಪ್ರವಾಹದಿಂದ ಮುಂಗಾರು ಬೆಳೆ ಪೂರ್ಣ ಹಾಳಾಗಿದೆ. ಹಿಂಗಾರು ಬೆಳೆ ಮೇಲೆ ನಿರೀಕ್ಷೆ ಇಟ್ಟುಕೊಂಡ ರೈತರಿಗೆ ವಿದ್ಯುತ್ ಕೊರತೆ ಎದುರಾಗಿದೆ. ಬೆಳಿಗ್ಗೆ 9 ರಿಂದ 4ರವರೆಗೆ ವರೆಗೆ ರೈತರಿಗೆ ತ್ರಿಫೇಸ್ ವಿದ್ಯುತ್ ಕೊಡಬೇಕು ಎಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಪದೇ ಪದೇ ವಿದ್ಯುತ್ ಕಡಿತದಿಂದ ಕಬ್ಬು, ಕಡಲೆ ಬೆಳೆಗೆ ನೀರು ಹರಿಸಲು ಆಗುತ್ತಿಲ್ಲ. ನಮ್ಮಲ್ಲಿ ಲೈನಮನ್ಗಳು ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ರೈತ ಮುಖಂಡ ರವಿ ದೇವರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಭಾರಿ ಮಳೆ ಹಾಗೂ ಪ್ರವಾಹದಿಂದ ನದಿ ಪಾತ್ರದ ಹೊಲಗಳಲ್ಲಿ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಜೋತಾಡುತ್ತಿವೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<p>ಈಚೆಗೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಪ್ರಭು ಚವಾಣ್ ಹಾಗೂ ಅಧಿಕಾರಿಗಳಿಗೆ ರೈತರು ಕೃಷಿ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್:</strong> ತಾಲ್ಲೂಕಿನ ಮಂಜ್ರಾ ನದಿ ಪಾತ್ರದ ಕೌಡಗಾಂವ, ಬಲ್ಲೂರ(ಜೆ) ಕೌಠಾ(ಕೆ), ಕೌಠಾ(ಬಿ), ಪಾಶಾಪೂರ, ಗಡಿಕುಶನೂರ ಸೇರಿದಂತೆ ವಿವಿಧ ಗ್ರಾಮಗಳ ರೈತರ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಎಂದು ರೈತರು ಗೋಳು ತೋಡಿಕೊಂಡರು.</p>.<p>ಈ ಬಾರಿ ಜಾಸ್ತಿ ಮಳೆ ಹಾಗೂ ನದಿ ಪ್ರವಾಹದಿಂದ ಮುಂಗಾರು ಬೆಳೆ ಪೂರ್ಣ ಹಾಳಾಗಿದೆ. ಹಿಂಗಾರು ಬೆಳೆ ಮೇಲೆ ನಿರೀಕ್ಷೆ ಇಟ್ಟುಕೊಂಡ ರೈತರಿಗೆ ವಿದ್ಯುತ್ ಕೊರತೆ ಎದುರಾಗಿದೆ. ಬೆಳಿಗ್ಗೆ 9 ರಿಂದ 4ರವರೆಗೆ ವರೆಗೆ ರೈತರಿಗೆ ತ್ರಿಫೇಸ್ ವಿದ್ಯುತ್ ಕೊಡಬೇಕು ಎಂಬ ನಿಯಮವಿದೆ. ಆದರೆ ಈ ನಿಯಮ ಪಾಲನೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.</p>.<p>ಪದೇ ಪದೇ ವಿದ್ಯುತ್ ಕಡಿತದಿಂದ ಕಬ್ಬು, ಕಡಲೆ ಬೆಳೆಗೆ ನೀರು ಹರಿಸಲು ಆಗುತ್ತಿಲ್ಲ. ನಮ್ಮಲ್ಲಿ ಲೈನಮನ್ಗಳು ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ಸಮಸ್ಯೆ ಉಂಟಾಗುತ್ತಿದೆ ಎಂದು ರೈತ ಮುಖಂಡ ರವಿ ದೇವರೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಭಾರಿ ಮಳೆ ಹಾಗೂ ಪ್ರವಾಹದಿಂದ ನದಿ ಪಾತ್ರದ ಹೊಲಗಳಲ್ಲಿ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಜೋತಾಡುತ್ತಿವೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.</p>.<p>ಈಚೆಗೆ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಪ್ರಭು ಚವಾಣ್ ಹಾಗೂ ಅಧಿಕಾರಿಗಳಿಗೆ ರೈತರು ಕೃಷಿ ಪಂಪಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಮನವಿ ಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>