ಈ ವಿಷಯಕ್ಕೆ ಸಂಬಂಧಿಸಿದಂತೆ ಅ. 27ರ ‘ಪ್ರಜಾವಾಣಿ’ಯಲ್ಲಿ ‘ರಸ್ತೆ ಇಕ್ಕೆಲಗಳಲ್ಲಿ ಬೆಳೆದ ಮುಳ್ಳುಕಂಟಿ’ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಗೊಂಡಿತ್ತು. ಪತ್ರಿಕೆಯಲ್ಲಿ ವರದಿ ಪ್ರಕಟಗೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಕ್ಷಣ ಸರ್ವೇ ಮಾಡಿಸಿ, ರಸ್ತೆ ಪಕ್ಕದ ಹುಲ್ಲು ಬೆಳೆದ ಕಂಟಿಗಳು ತೆರವುಗೊಳಿಸಿ ಸಾರ್ವಜನಿಕರಿಗೆ ಅನುವು ಮಾಡಿಕೊಟ್ಟಿದ್ದಾರೆ.