ಶಾಂತಿ, ನೆಮ್ಮದಿಗೆ ನಿತ್ಯ ದೇವರನ್ನು ಪೂಜಿಸಬೇಕು. ಗುರು, ತಂದೆ-ತಾಯಿಯ ಸೇವೆ ಮಾಡಬೇಕು. ಬೀದರ್ ಜಿಲ್ಲೆ ಬಸವಾದಿ ಶರಣರು ನಡೆದಾಡಿದ ಪುಣ್ಯ ಭೂಮಿ. ಇಲ್ಲಿ ನೆಲೆಸಿರುವ ಎಲ್ಲರೂ ಪುಣ್ಯವಂತರು. ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕು ಸಾಗಿಸಬೇಕು. ಆಧ್ಯಾತ್ಮಿಕ ಜಾಗೃತಿ, ಮಾನವೀಯ ಮೌಲ್ಯಗಳ ಬೋಧನೆ ಸೇರಿ ದೇಶಕ್ಕೆ ಸಾಧು, ಸಂತರು ನೀಡಿದ ಕೊಡುಗೆ ಅಪಾರವಾಗಿದೆ. ಸಾಧು, ಸಂತರ ದರ್ಶನ ಹಾಗೂ ವಾಣಿ ಆಲಿಸುವುದರಿಂದ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ದೊರಕುತ್ತದೆ ಎಂದು ಹೇಳಿದರು.