ತರಬೇತಿಯಲ್ಲಿ 21 ಮಸಾಲೆ ಪದಾರ್ಥಗಳ ತಯಾರಿಕೆ ಬಗೆ ಹೇಳಿಕೊಡಲಾಯಿತು. ಸ್ಥಳದಲ್ಲೇ ಕೆಲ ಪದಾರ್ಥಗಳನ್ನು ಸಿದ್ಧಪಡಿಸಿ ತೋರಿಸಲಾಯಿತು. ಶಿಬಿರವನ್ನು ಉದ್ಘಾಟಿಸಿದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಸ್ವ ಉದ್ಯೋಗ ಉಪ ಸಮಿತಿಯ ಅಧ್ಯಕ್ಷೆ ಮಂಜುಳಾ ಡೊಳ್ಳಿ ಮಾತನಾಡಿ, ಈಚಿನ ದಿನಗಳಲ್ಲಿ ನಾಲಿಗೆ ರುಚಿಗಾಗಿ ಜಂಕ್ ಫುಡ್ ಸೇವನೆ ಅತಿಯಾಗಿದ್ದು, ಅನೇಕ ರೋಗಗಳಿಗೆ ಕಾರಣ ಆಗುತ್ತಿದೆ. ಹೀಗಾಗಿ ಸಾಂಪ್ರದಾಯಿಕ ಮಸಾಲೆ ಪದಾರ್ಥಗಳ ತಯಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.