ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಕಳೆದ ಸಲ ಪಕ್ಷದ ಅಭ್ಯರ್ಥಿ ಇದ್ದುದರಿಂದ ನನ್ನನ್ನು ಪಕ್ಷ ಪರಿಗಣಿಸಲಿದೆ ಎಂಬ ಭರವಸೆಯಿದೆ. ಆದರೆ, ಪಕ್ಷದಲ್ಲಿ 12 ಜನ ಆಕಾಂಕ್ಷಿಗಳಿದ್ದು ಯಾರಿಗೆ ಟಿಕೆಟ್ ದೊರಕುತ್ತದೆ ಎಂಬುದು ಕೊನೆಯವರೆಗೂ ಹೇಳಲಾಗದು. ಆದರೆ, ಕೆಲವರು ಈಗಾಗಲೇ ತಮಗೇ ಟಿಕೆಟ್ ಅಂತಿಮವಾಗಿದೆ ಎಂದು ಹೇಳಿ ಜನರ ದಿಕ್ಕು ತಪ್ಪಿಸುತ್ತಿರುವುದು ಸರಿಯಲ್ಲ’ ಎಂದರು.