ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಔರಾದ್ ತಾಲ್ಲೂಕಿನಲ್ಲಿ 13,135 ಹೆಕ್ಟೇರ್ ಹಾಗೂ ಕಮಲನಗರ ನತಾಲ್ಲೂಕಿನಲ್ಲಿ 13,229 ಹೆಕ್ಟೇರ್ ಸೇರಿದಂತೆ ಒಟ್ಟು 26,364 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಷ್ಟವಾಗಿರುವ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಔರಾದ್ ತಾಲ್ಲೂಕಿಗೆ ಕೇಂದ್ರ ಸರ್ಕಾರದ ರೂ. 8.93 ಕೋಟಿ ಮತ್ತು ರಾಜ್ಯ ಸರ್ಕಾರದ ರೂ. 8.93 ಕೋಟಿ ಸೇರಿ ಒಟ್ಟು 17.86 ಕೋಟಿ ಬಿಡುಗಡೆಯಾಗಲಿದೆ ಎಂದಿದ್ದಾರೆ.