<p><strong>ಕಮಲನಗರ: </strong>‘ಬಿಜೆಪಿ ಜನರಿಗೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಜನರು ಇದನ್ನು ಅರಿತು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು’ ಎಂದು ಜೆಡಿಎಸ್ ಮುಖಂಡ ಅವಿನಾಶ ಶಿಂಧೆ ಹೇಳಿದರು.</p>.<p>ತಾಲ್ಲೂಕಿನ ಖೇಡ ಸಂಗಮ, ಸೋನಾಳ, ಸೋನಾಳವಾಡಿ, ಹೊರಂಡಿ ಹಾಗೂ ಬಾಲೂರ ಚಿಕ್ಕಮುರ್ಗ ಗ್ರಾಮಗಳಲ್ಲಿ ಸಂಚರಿಸಿ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಿ ಮಾತನಾಡಿದರು.</p>.<p>ದೇಶದಲ್ಲಿ ಡಬಲ್ ಎಂಜಿನ್ ಸರ್ಕಾರವಿದ್ದರು ಸಹ ಜನರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಸಬ್ಸಿಡಿ ಸಹ ನಿಲ್ಲಿಸಲಾಗಿದೆ ಎಂದು ದೂರಿದರು.</p>.<p>ಎಚ್.ಡಿ.ಕುಮಾರಸ್ವಾಮಿ ಅವರ ಅಧಿಕಾರವಧಿಯಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ರೈತರಿಗೆ ಸೌಲಭ್ಯಗಳನ್ನು ನೀಡಿದ್ದಾರೆ ಎಂದರು.</p>.<p>ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.</p>.<p>ಶಿವಕುಮಾರ ಬದ್ನಾಳೆ, ಸುರೇಶ ಕಾಂಬಳೆ, ಸಾಯಿನಾಥ ಗೌಳಿ, ರಜನಿಕಾಂತ ಕಾಂಬಳೆ, ಶಮ್ಸುದ್ದೀನ್ ಶೇಖ್ ಹಾಗೂ ಬಬನ್ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಮಲನಗರ: </strong>‘ಬಿಜೆಪಿ ಜನರಿಗೆ ಬೆಲೆ ಏರಿಕೆಯ ಕೊಡುಗೆ ನೀಡಿದೆ. ಜನರು ಇದನ್ನು ಅರಿತು ಬಿಜೆಪಿಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು’ ಎಂದು ಜೆಡಿಎಸ್ ಮುಖಂಡ ಅವಿನಾಶ ಶಿಂಧೆ ಹೇಳಿದರು.</p>.<p>ತಾಲ್ಲೂಕಿನ ಖೇಡ ಸಂಗಮ, ಸೋನಾಳ, ಸೋನಾಳವಾಡಿ, ಹೊರಂಡಿ ಹಾಗೂ ಬಾಲೂರ ಚಿಕ್ಕಮುರ್ಗ ಗ್ರಾಮಗಳಲ್ಲಿ ಸಂಚರಿಸಿ ಪಕ್ಷದ ಸಾಧನೆಗಳನ್ನು ಜನರಿಗೆ ತಿಳಿಸಿ ಮಾತನಾಡಿದರು.</p>.<p>ದೇಶದಲ್ಲಿ ಡಬಲ್ ಎಂಜಿನ್ ಸರ್ಕಾರವಿದ್ದರು ಸಹ ಜನರಿಗೆ ಸೌಲಭ್ಯಗಳು ಸಿಗುತ್ತಿಲ್ಲ. ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಸಬ್ಸಿಡಿ ಸಹ ನಿಲ್ಲಿಸಲಾಗಿದೆ ಎಂದು ದೂರಿದರು.</p>.<p>ಎಚ್.ಡಿ.ಕುಮಾರಸ್ವಾಮಿ ಅವರ ಅಧಿಕಾರವಧಿಯಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ರೈತರಿಗೆ ಸೌಲಭ್ಯಗಳನ್ನು ನೀಡಿದ್ದಾರೆ ಎಂದರು.</p>.<p>ಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ಗೆ ಮತ ನೀಡಬೇಕು ಎಂದು ಮನವಿ ಮಾಡಿದರು.</p>.<p>ಶಿವಕುಮಾರ ಬದ್ನಾಳೆ, ಸುರೇಶ ಕಾಂಬಳೆ, ಸಾಯಿನಾಥ ಗೌಳಿ, ರಜನಿಕಾಂತ ಕಾಂಬಳೆ, ಶಮ್ಸುದ್ದೀನ್ ಶೇಖ್ ಹಾಗೂ ಬಬನ್ ರಾಠೋಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>