ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಹುಮನಾಬಾದ್ ಬಳಿ ಖಾಸಗಿ ಬಸ್‌ಗೆ ಬೆಂಕಿ

Last Updated 2 ಸೆಪ್ಟೆಂಬರ್ 2020, 15:41 IST
ಅಕ್ಷರ ಗಾತ್ರ

ಹುಮನಾಬಾದ್: ಸಮೀಪದ ಧುಮನಸೂರು ಗ್ರಾಮದ ರಾಜ್ಯ ಹೆದ್ದಾರಿ ಮೇಲೆ ಬೀದರ್‍ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಜೈ ಭವಾನಿ ಖಾಸಗಿ ಟ್ರಾವೆಲ್ಸ್‌ಗೆ ಸೇರಿದ ಬಸ್‌ಗೆ ಬುಧವಾರ ಆಕಸ್ಮಿಕವಾಗಿ ಬೆಂಕಿ ತಗುಲಿ, ಬಸ್‌ ಸುಟ್ಟು ಕರಕಲಾಗಿದೆ.

ಬಸ್‌ನಲ್ಲಿದ್ದ 18 ಜನ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಂಜೆ 7 ಗಂಟೆ ಸುಮಾರಿಗೆ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಪ್ರಯಾಣಿಕರನ್ನು ಕೆಳಗೆ ಇಳಿಸಿದ್ದಾರೆ. ಅವರ ಸಮಯಪ್ರಜ್ಞೆಯಿಂದ ಪ್ರಾಣಾಪಾಯದಿಂದ ಪಾರಾಗಿದ್ಧಾರೆ.

ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಸುಮಾರು ಒಂದು ಗಂಟೆ ಕಾಲ ಸಂಚಾರಕ್ಕೆ ಅಡೆತಡೆ ಉಂಟಾಯಿತು.

ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ಯಾತನೂರ ಹಾಗೂ ಪಿಎಸ್‍ಐ ರವಿಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT