ಬೀದರ್: ಗಣರಾಜ್ಯೋತ್ಸವ ಪ್ರಯುಕ್ತ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ಹಾಗೂ ವೀರ ಕನ್ನಡಿಗರ ಸೇನೆ ವತಿಯಿಂದ ಇಲ್ಲಿಯ ಶಹಾಗಂಜ್ನ ಅಂಬೇಡ್ಕರ್ ಸಮುದಾಯ ಭವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.
ವಾಲಿಬಾಲ್, ಫುಟ್ಬಾಲ್, ಕ್ರಿಕೆಟ್, ಕವನ, ಭಾಷಣ, ನಿಬಂಧ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.
ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕದ ರಾಜ್ಯ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಮಾತನಾಡಿ, ಸ್ಪರ್ಧೆಯಲ್ಲಿನ ವಿಷಯಗಳನ್ನು ಕೃತಿ ರೂಪದಲ್ಲಿ ಹೊರ ತರಲಾಗುವುದು. ಬರುವ ದಿನಗಳಲ್ಲಿ ಸಮಾಜಕ್ಕೆ ಮೌಲ್ಯಗಳನ್ನು ನೀಡಿದ ಮಹಾ ಪುರುಷರ ಕುರಿತು ಸ್ಪರ್ಧೆ ಏರ್ಪಡಿಸಲಾಗುವುದು ಎಂದು ತಿಳಿಸಿದರು.