ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮಾತನಾಡಿ, ‘ಬೀದರ್ ಜಿಲ್ಲೆಯಲ್ಲಿ ಕೋವಿಡ್ ಹರಡುವಿಕೆ ತಡೆಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೆ ಆಮ್ಲಜನಕ, ಬೆಡ್, ವೆಂಟಿಲೇಟರ್ಗಳು, ಆಮ್ಲಜನಕ ಸಾಂದ್ರಕ, ಸಿಟಿ ಸ್ಕ್ಯಾನ್ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳು, ಆಂಬುಲನ್ಸ್ ಖರೀದಿಗಾಗಿ ಕೂಡಲೇ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಲಾಗುವುದು’ ಎಂದು ತಿಳಿಸಿದರು.