<p><strong>ಬೀದರ್:</strong> ಮಲಗಿ ಬೆಟ್ಟದ ಶ್ರೀ ಸಿದ್ಧೇಶ್ವರ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಸಂಕಲ್ಪ ತೊಡಲಾಗಿದೆ ಎಂದು ಬೇಮಳಖೇಡದರಾಜಶೇಖರ ಶಿವಾಚಾರ್ಯ ಹೇಳಿದರು.</p>.<p>ಇಲ್ಲಿಗೆ ಸಮೀಪದ ಮಲಗಿ ಬೆಟ್ಟದಲ್ಲಿ ನಡೆದ ಕಾರ್ತಿಕ ದೀಪೋತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಭಕ್ತರ ಸಹಯೋಗದೊಂದಿಗೆ ಕ್ಷೇತ್ರದಲ್ಲಿ ಸಿಸಿ ರಸ್ತೆ, ವಿದ್ಯುತ್ ದೀಪ, ಮಹಾದ್ವಾರ ನಿರ್ಮಾಣ ಮೊದಲಾದ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಕ್ಷೇತ್ರದ ಸಮಗ್ರ ವಿಕಾಸಕ್ಕೆ ಬರುವ ದಿನಗಳಲ್ಲಿ ನಿಯೋಗದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರನ್ನೂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕ್ಷೇತ್ರದ ಅಭಿವೃದ್ಧಿಯ ಮೊದಲ ಹಂತವಾಗಿ ಪ್ರತಿ ಅಮಾವಾಸ್ಯೆಯಂದು ಸಿದ್ಧೇಶ್ವರ ದೇವರಿಗೆ ರುದ್ರಾಭಿಷೇಕ, ಅನ್ನದಾನ, ಭಜನೆ ಕಾರ್ಯಕ್ರಮಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.</p>.<p>ಬೀದರ್ನ ಕುಶಾಲರಾವ್ ಗೌರಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರುತಿ, ಕಂಟೆಪ್ಪ ಭಂಗೂರೆ, ಮಾದಪ್ಪ ಭಂಗೂರೆ, ಬೀರಪ್ಪ, ಭೀಮಣ್ಣ, ಮಾರುತಿ, ಸಿದ್ಧು ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಮಲಗಿ ಬೆಟ್ಟದ ಶ್ರೀ ಸಿದ್ಧೇಶ್ವರ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಸಂಕಲ್ಪ ತೊಡಲಾಗಿದೆ ಎಂದು ಬೇಮಳಖೇಡದರಾಜಶೇಖರ ಶಿವಾಚಾರ್ಯ ಹೇಳಿದರು.</p>.<p>ಇಲ್ಲಿಗೆ ಸಮೀಪದ ಮಲಗಿ ಬೆಟ್ಟದಲ್ಲಿ ನಡೆದ ಕಾರ್ತಿಕ ದೀಪೋತ್ಸವದ ಸಾನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಭಕ್ತರ ಸಹಯೋಗದೊಂದಿಗೆ ಕ್ಷೇತ್ರದಲ್ಲಿ ಸಿಸಿ ರಸ್ತೆ, ವಿದ್ಯುತ್ ದೀಪ, ಮಹಾದ್ವಾರ ನಿರ್ಮಾಣ ಮೊದಲಾದ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಕ್ಷೇತ್ರದ ಸಮಗ್ರ ವಿಕಾಸಕ್ಕೆ ಬರುವ ದಿನಗಳಲ್ಲಿ ನಿಯೋಗದಲ್ಲಿ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರರಾವ್ ಅವರನ್ನೂ ಭೇಟಿ ಮಾಡಲಾಗುವುದು ಎಂದು ತಿಳಿಸಿದರು.</p>.<p>ಕ್ಷೇತ್ರದ ಅಭಿವೃದ್ಧಿಯ ಮೊದಲ ಹಂತವಾಗಿ ಪ್ರತಿ ಅಮಾವಾಸ್ಯೆಯಂದು ಸಿದ್ಧೇಶ್ವರ ದೇವರಿಗೆ ರುದ್ರಾಭಿಷೇಕ, ಅನ್ನದಾನ, ಭಜನೆ ಕಾರ್ಯಕ್ರಮಗಳನ್ನು ಆರಂಭಿಸಲಾಗುವುದು ಎಂದು ಹೇಳಿದರು.</p>.<p>ಬೀದರ್ನ ಕುಶಾಲರಾವ್ ಗೌರಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಾರುತಿ, ಕಂಟೆಪ್ಪ ಭಂಗೂರೆ, ಮಾದಪ್ಪ ಭಂಗೂರೆ, ಬೀರಪ್ಪ, ಭೀಮಣ್ಣ, ಮಾರುತಿ, ಸಿದ್ಧು ರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>