<p><strong>ಬೀದರ್: </strong>ಐತಿಹಾಸಿಕ ಸ್ಮಾರಕಗಳ ರಕ್ಷಣೆ ಕೆಲಸ ಆಗಬೇಕು ಎಂದು ಸುಲೆಪೇಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಾಗಾ ನುಡಿದರು.</p>.<p>ಇಲ್ಲಿಯ ಜನವಾಡ ರಸ್ತೆಯಲ್ಲಿ ಇರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಪರಂಪರೆ ಸಪ್ತಾಹ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿ ಗ್ರಾಮಗಳಲ್ಲೂ ಸ್ಮಾರಕಗಳು ಇವೆ. ಅವುಗಳ ಇತಿಹಾಸದ ಸಂಶೋಧನೆ ಅಗತ್ಯವಾಗಿದೆ ಎಂದು ಹೇಳಿದರು.</p>.<p>ಉತ್ಸವಗಳು ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನೆರವಾಗುತ್ತವೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಕಲಬುರಗಿಯ ಸರ್ಕಾರಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ. ಇಂದುಮತಿ ಪಾಟೀಲ ತಿಳಿಸಿದರು.</p>.<p>ಭಾರತದ ಪರಂಪರೆಗೆ ಶರಣರ ನಾಡು ಬೀದರ್ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು.</p>.<p>ಭಾರತವು ಶ್ರೀಮಂತ ಪರಂಪರೆ, ಸಂಸ್ಕೃತಿಯನ್ನು ಹೊಂದಿದೆ ಎಂದು ಪ್ರಾಚಾರ್ಯ ರಾಜಪ್ಪ ಬಬಚೇಡಿ ಹೇಳಿದರು.<br />ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆ ಭಾಗ್ಯವತಿ ಮಾತನಾಡಿದರು.</p>.<p>ಧನರಾಜ ತುಡಮೆ, ಪ್ರೊ. ಮನೋಜಕುಮಾರ, ಪಾರ್ವತಿ ಮೇತ್ರೆ, ಭೀಮಷಾ, ಮುನ್ನೆಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಐತಿಹಾಸಿಕ ಸ್ಮಾರಕಗಳ ರಕ್ಷಣೆ ಕೆಲಸ ಆಗಬೇಕು ಎಂದು ಸುಲೆಪೇಟ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಡಾ. ಬಸವರಾಜ ಬಾಗಾ ನುಡಿದರು.</p>.<p>ಇಲ್ಲಿಯ ಜನವಾಡ ರಸ್ತೆಯಲ್ಲಿ ಇರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಪರಂಪರೆ ಸಪ್ತಾಹ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಪ್ರತಿ ಗ್ರಾಮಗಳಲ್ಲೂ ಸ್ಮಾರಕಗಳು ಇವೆ. ಅವುಗಳ ಇತಿಹಾಸದ ಸಂಶೋಧನೆ ಅಗತ್ಯವಾಗಿದೆ ಎಂದು ಹೇಳಿದರು.</p>.<p>ಉತ್ಸವಗಳು ದೇಶದ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನೆರವಾಗುತ್ತವೆ ಎಂದು ಕಾರ್ಯಕ್ರಮ ಉದ್ಘಾಟಿಸಿದ ಕಲಬುರಗಿಯ ಸರ್ಕಾರಿ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆ ಡಾ. ಇಂದುಮತಿ ಪಾಟೀಲ ತಿಳಿಸಿದರು.</p>.<p>ಭಾರತದ ಪರಂಪರೆಗೆ ಶರಣರ ನಾಡು ಬೀದರ್ ಜಿಲ್ಲೆಯ ಕೊಡುಗೆ ಅಪಾರವಾಗಿದೆ ಎಂದರು.</p>.<p>ಭಾರತವು ಶ್ರೀಮಂತ ಪರಂಪರೆ, ಸಂಸ್ಕೃತಿಯನ್ನು ಹೊಂದಿದೆ ಎಂದು ಪ್ರಾಚಾರ್ಯ ರಾಜಪ್ಪ ಬಬಚೇಡಿ ಹೇಳಿದರು.<br />ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥೆ ಭಾಗ್ಯವತಿ ಮಾತನಾಡಿದರು.</p>.<p>ಧನರಾಜ ತುಡಮೆ, ಪ್ರೊ. ಮನೋಜಕುಮಾರ, ಪಾರ್ವತಿ ಮೇತ್ರೆ, ಭೀಮಷಾ, ಮುನ್ನೆಮ್ಮ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>