<p><strong>ಬೀದರ್:</strong> ‘ದೇಸಿ ಗೋತಳಿಗಳ ರಕ್ಷಣೆಗೆ ಕೃಷಿಕರು ಮುಂದಾಗಬೇಕು. ಗೋಶಾಲೆಗಳ ಮೂಲಕ ಈ ಪ್ರಯತ್ನ ಮುಂದುವರಿಯಬೇಕು’ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಚ್.ಡಿ. ನಾರಾಯಣಸ್ವಾಮಿ ಹೇಳಿದರು.</p>.<p>ವೈಷ್ಣೋದೇವಿ ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ನೌಬಾದ್ ಸಮೀಪದ ಜ್ಞಾನ ಶಿವಯೋಗಾಶ್ರಮದಲ್ಲಿ ನಿರ್ಮಿಸಿದ ಶ್ರೀಮಾತೇಶ್ವರಿ ಗೋಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ತಾಂತ್ರಿಕ ಜೀವನದಲ್ಲಿ ಸಂಸ್ಕಾರವನ್ನು ಮರೆಯುತ್ತಿದ್ದೇವೆ. ಆದರೆ, ಪಾರಂಪರಿಕ ಗೋಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಗಮೇಶ ಬಿರಾದಾರ ಅವರು ಗೋಶಾಲೆ ಆರಂಭಿಸಿರುವುದು ಶ್ಲಾಘನೀಯ’ ಎಂದು ತಿಳಿಸಿದರು.</p>.<p>ಬೇಮಳಖೇಡ ಗೋರ್ಟಾದ ಹಿರೇಮಠ ಸಂಸ್ಥಾನದ ರಾಜಶೇಖರ ಶಿವಾಚಾರ್ಯರು ಮಾತನಾಡಿ, ‘ಸಂಗಮೇಶ ಬಿರಾದಾರ ಅವರ ನಿಸ್ವಾರ್ಥದಿಂದ ಗೋಶಾಲೆ ಆರಂಭವಾಗಿದೆ. ಇಂತಹ ಸಾಮಾಜಿಕ ಪುಣ್ಯದ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವುದು ಅವಶ್ಯಕವಾಗಿದೆ’ ಎಂದರು.</p>.<p>ವೈಷ್ಣೋದೇವಿ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಿರಾದಾರ ಮಾತನಾಡಿ, ‘50 ಗೋವುಗಳ ಸಾಕಣಿಕೆಗೆ ಶೆಡ್ ನಿರ್ಮಾಣ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಕೇಂದ್ರ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿದರು. ಮಾತೆ ಕರುಣಾದೇವಿ ಸಾನಿಧ್ಯ ವಹಿಸಿದ್ದರು. ಅತಿಥಿಯಾಗಿ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ರವೀಂದ್ರಕುಮಾರ ಭೂರೆ ಪಾಲ್ಗೊಂಡಿದ್ದರು.</p>.<p>ಸಂಜೀವಕುಮಾರ ಸ್ವಾಮಿ ಕಂದಗೂಳ, ಮಲ್ಲಿಕಾರ್ಜುನ ನಾಗಮಾರಪಳ್ಳಿ, ಮಲ್ಲಯ್ಯ ಸ್ವಾಮಿ ಐನೂಳ್ಳಿ, ಶಿವಕುಮಾರ ಪಾಂಚಾಳ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ಜರುಗಿತು.</p>.<p>ಓಂಪ್ರಕಾಶ ರೊಟ್ಟೆ, ಮಹೇಶ ಬೀದರಕರ್, ನಾಗಭೂಷಣ ಹುಗ್ಗಿ, ಸಿ.ಬಿ.ರೆಡ್ಡಿ, ಸಿದ್ರಾಮಯ್ಯ ಸ್ವಾಮಿ, ಪಾಂಡುರಂಗ ಪಾಂಚಾಳ, ಸುಭಾಷ ಬಿರಾದಾರ, ಸುನೀಲ ದಳವೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ‘ದೇಸಿ ಗೋತಳಿಗಳ ರಕ್ಷಣೆಗೆ ಕೃಷಿಕರು ಮುಂದಾಗಬೇಕು. ಗೋಶಾಲೆಗಳ ಮೂಲಕ ಈ ಪ್ರಯತ್ನ ಮುಂದುವರಿಯಬೇಕು’ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಚ್.ಡಿ. ನಾರಾಯಣಸ್ವಾಮಿ ಹೇಳಿದರು.</p>.<p>ವೈಷ್ಣೋದೇವಿ ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ನೌಬಾದ್ ಸಮೀಪದ ಜ್ಞಾನ ಶಿವಯೋಗಾಶ್ರಮದಲ್ಲಿ ನಿರ್ಮಿಸಿದ ಶ್ರೀಮಾತೇಶ್ವರಿ ಗೋಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಇಂದಿನ ತಾಂತ್ರಿಕ ಜೀವನದಲ್ಲಿ ಸಂಸ್ಕಾರವನ್ನು ಮರೆಯುತ್ತಿದ್ದೇವೆ. ಆದರೆ, ಪಾರಂಪರಿಕ ಗೋಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಗಮೇಶ ಬಿರಾದಾರ ಅವರು ಗೋಶಾಲೆ ಆರಂಭಿಸಿರುವುದು ಶ್ಲಾಘನೀಯ’ ಎಂದು ತಿಳಿಸಿದರು.</p>.<p>ಬೇಮಳಖೇಡ ಗೋರ್ಟಾದ ಹಿರೇಮಠ ಸಂಸ್ಥಾನದ ರಾಜಶೇಖರ ಶಿವಾಚಾರ್ಯರು ಮಾತನಾಡಿ, ‘ಸಂಗಮೇಶ ಬಿರಾದಾರ ಅವರ ನಿಸ್ವಾರ್ಥದಿಂದ ಗೋಶಾಲೆ ಆರಂಭವಾಗಿದೆ. ಇಂತಹ ಸಾಮಾಜಿಕ ಪುಣ್ಯದ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವುದು ಅವಶ್ಯಕವಾಗಿದೆ’ ಎಂದರು.</p>.<p>ವೈಷ್ಣೋದೇವಿ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಿರಾದಾರ ಮಾತನಾಡಿ, ‘50 ಗೋವುಗಳ ಸಾಕಣಿಕೆಗೆ ಶೆಡ್ ನಿರ್ಮಾಣ ಮಾಡಲಾಗಿದೆ’ ಎಂದು ತಿಳಿಸಿದರು.</p>.<p>ಕೇಂದ್ರ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿದರು. ಮಾತೆ ಕರುಣಾದೇವಿ ಸಾನಿಧ್ಯ ವಹಿಸಿದ್ದರು. ಅತಿಥಿಯಾಗಿ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ರವೀಂದ್ರಕುಮಾರ ಭೂರೆ ಪಾಲ್ಗೊಂಡಿದ್ದರು.</p>.<p>ಸಂಜೀವಕುಮಾರ ಸ್ವಾಮಿ ಕಂದಗೂಳ, ಮಲ್ಲಿಕಾರ್ಜುನ ನಾಗಮಾರಪಳ್ಳಿ, ಮಲ್ಲಯ್ಯ ಸ್ವಾಮಿ ಐನೂಳ್ಳಿ, ಶಿವಕುಮಾರ ಪಾಂಚಾಳ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ಜರುಗಿತು.</p>.<p>ಓಂಪ್ರಕಾಶ ರೊಟ್ಟೆ, ಮಹೇಶ ಬೀದರಕರ್, ನಾಗಭೂಷಣ ಹುಗ್ಗಿ, ಸಿ.ಬಿ.ರೆಡ್ಡಿ, ಸಿದ್ರಾಮಯ್ಯ ಸ್ವಾಮಿ, ಪಾಂಡುರಂಗ ಪಾಂಚಾಳ, ಸುಭಾಷ ಬಿರಾದಾರ, ಸುನೀಲ ದಳವೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>