ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಸಿ ಗೋತಳಿಗಳ ರಕ್ಷಣೆ ಅಗತ್ಯ

ಕುಲಪತಿ ಪ್ರೊ. ಎಚ್.ಡಿ. ನಾರಾಯಣಸ್ವಾಮಿ ಹೇಳಿಕೆ
Last Updated 24 ಜೂನ್ 2021, 16:28 IST
ಅಕ್ಷರ ಗಾತ್ರ

ಬೀದರ್‌: ‘ದೇಸಿ ಗೋತಳಿಗಳ ರಕ್ಷಣೆಗೆ ಕೃಷಿಕರು ಮುಂದಾಗಬೇಕು. ಗೋಶಾಲೆಗಳ ಮೂಲಕ ಈ ಪ್ರಯತ್ನ ಮುಂದುವರಿಯಬೇಕು’ ಎಂದು ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಚ್.ಡಿ. ನಾರಾಯಣಸ್ವಾಮಿ ಹೇಳಿದರು.

ವೈಷ್ಣೋದೇವಿ ಸಾಂಸ್ಕೃತಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ನೌಬಾದ್ ಸಮೀಪದ ಜ್ಞಾನ ಶಿವಯೋಗಾಶ್ರಮದಲ್ಲಿ ನಿರ್ಮಿಸಿದ ಶ್ರೀಮಾತೇಶ್ವರಿ ಗೋಶಾಲೆ ಉದ್ಘಾಟಿಸಿ ಅವರು ಮಾತನಾಡಿದರು.

‘ಇಂದಿನ ತಾಂತ್ರಿಕ ಜೀವನದಲ್ಲಿ ಸಂಸ್ಕಾರವನ್ನು ಮರೆಯುತ್ತಿದ್ದೇವೆ. ಆದರೆ, ಪಾರಂಪರಿಕ ಗೋಸಂತತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಂಗಮೇಶ ಬಿರಾದಾರ ಅವರು ಗೋಶಾಲೆ ಆರಂಭಿಸಿರುವುದು ಶ್ಲಾಘನೀಯ’ ಎಂದು ತಿಳಿಸಿದರು.

ಬೇಮಳಖೇಡ ಗೋರ್ಟಾದ ಹಿರೇಮಠ ಸಂಸ್ಥಾನದ ರಾಜಶೇಖರ ಶಿವಾಚಾರ್ಯರು ಮಾತನಾಡಿ, ‘ಸಂಗಮೇಶ ಬಿರಾದಾರ ಅವರ ನಿಸ್ವಾರ್ಥದಿಂದ ಗೋಶಾಲೆ ಆರಂಭವಾಗಿದೆ. ಇಂತಹ ಸಾಮಾಜಿಕ ಪುಣ್ಯದ ಕಾರ್ಯಕ್ಕೆ ಪ್ರತಿಯೊಬ್ಬರೂ ಕೈಜೋಡಿಸುವುದು ಅವಶ್ಯಕವಾಗಿದೆ’ ಎಂದರು.

ವೈಷ್ಣೋದೇವಿ ಟ್ರಸ್ಟ್‌ ಅಧ್ಯಕ್ಷ ಸಂಗಮೇಶ ಬಿರಾದಾರ ಮಾತನಾಡಿ, ‘50 ಗೋವುಗಳ ಸಾಕಣಿಕೆಗೆ ಶೆಡ್‌ ನಿರ್ಮಾಣ ಮಾಡಲಾಗಿದೆ’ ಎಂದು ತಿಳಿಸಿದರು.

ಕೇಂದ್ರ ಜಾಗೃತಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿದರು. ಮಾತೆ ಕರುಣಾದೇವಿ ಸಾನಿಧ್ಯ ವಹಿಸಿದ್ದರು. ಅತಿಥಿಯಾಗಿ ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕ ರವೀಂದ್ರಕುಮಾರ ಭೂರೆ ಪಾಲ್ಗೊಂಡಿದ್ದರು.

ಸಂಜೀವಕುಮಾರ ಸ್ವಾಮಿ ಕಂದಗೂಳ, ಮಲ್ಲಿಕಾರ್ಜುನ ನಾಗಮಾರಪಳ್ಳಿ, ಮಲ್ಲಯ್ಯ ಸ್ವಾಮಿ ಐನೂಳ್ಳಿ, ಶಿವಕುಮಾರ ಪಾಂಚಾಳ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮ ಜರುಗಿತು.

ಓಂಪ್ರಕಾಶ ರೊಟ್ಟೆ, ಮಹೇಶ ಬೀದರಕರ್, ನಾಗಭೂಷಣ ಹುಗ್ಗಿ, ಸಿ.ಬಿ.ರೆಡ್ಡಿ, ಸಿದ್ರಾಮಯ್ಯ ಸ್ವಾಮಿ, ಪಾಂಡುರಂಗ ಪಾಂಚಾಳ, ಸುಭಾಷ ಬಿರಾದಾರ, ಸುನೀಲ ದಳವೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT