ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆಗಳಿಗೆ ಬೆಳೆ ವಿಮೆ ಕಟ್ಟಿರುವ ರೈತರಿಗೆ ವಿಮೆ ಹಣ ಕೊಡಬೇಕು. ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತ ವಿರೋಧಿ ಮೂರು ಕೃಷಿ ಮಸೂದೆಗಳನ್ನು ಹಿಂದಕ್ಕೆ ಪಡೆಯಬೇಕು. ಕಾಡು ಪ್ರಾಣಿಗಳಿಂದ ರೈತರ ಬೆಳೆ ನಷ್ಟ ಆಗುತ್ತಿರುವುದನ್ನು ತಪ್ಪಿಸಬೇಕು. ಕಾರಂಜಾ ಸಂತ್ರಸ್ತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಶ್ರೀಮಂತ ಬಿರಾದಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಸ್ವಾಮಿ ಸಿರ್ಸಿ, ಶಂಕರೆಪ್ಪ ಪಾರಾ, ಬಾಬುರಾವ್ ಜೋಳದಾಬಕೆ, ಶೇಷರಾವ್ ಕಣಜಿ, ನಾಗಯ್ಯಾ ಸ್ವಾಮಿ, ಸುಭಾಷ ರಗಟೆ, ಪ್ರಕಾಶ ಬವಗೆ, ಸತೀಶ, ಲಕ್ಷ್ಮಣರಾವ್, ಪ್ರವೀಣ, ನಾಗಶೆಟ್ಟೆಪ್ಪ ಹಾಗೂ ಮಲ್ಲಿಕಾರ್ಜುನ ಇದ್ದರು.