ಮೊರಾರ್ಜಿ ದೇಸಾಯಿ ವಸತಿ ನಿಲಯದಲ್ಲಿ ಹಲವು ವರ್ಷಗಳಿಂದ ಸಮಸ್ಯೆಗಳಿವೆ. ಶಿಕ್ಷಕರಲ್ಲಿ ಗುಂಪುಗಾರಿಕೆಯಿಂದ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾ ಗುತ್ತಿದೆ. ಬೋಧಕೇತರ ಸಿಬ್ಬಂದಿಯನ್ನು ನಿಲಯ ಪಾಲಕರಾಗಿ ನೇಮಕ ಮಾಡುವುದು ಉತ್ತಮ ಎಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ರಾಜಕುಮಾರ ತೊಂಡಾರೆ ಎಂದು ಹೇಳಿದರು.