ವಸತಿ ಯೋಜನೆಗಳ ಅಡಿಯಲ್ಲಿ ಲೈಂಗಿಕ ಕಾರ್ಯಕರ್ತೆಯರಿಗೆ ನಿವೇಶನ ಹಾಗೂ ಮನೆ ಮಂಜೂರು ಮಾಡಬೇಕು. ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಲೈಂಗಿಕ ಕಾರ್ಯಕರ್ತೆಯರಿಗೆ ನಿವೇಶನ ಕೊಡುವ ದಿಸೆಯಲ್ಲಿ ಯಾವುದೇ ಪ್ರಯತ್ನಗಳು ನಡೆದಿಲ್ಲ. ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಮನವಿ ಮಾಡಿದರು. ಸಮುದಾಯ ನಾಯಕಿ ಶ್ರೀದೇವಿ, ಯುನಿಯನ್ ಉಪಾಧ್ಯಕ್ಷೆ ಭೂಮಿಕಾ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿಪತ್ರ ಸಲ್ಲಿಸಿದರು.