ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆದಿಜಾಂಬವ ಸಂಘದಿಂದ ಪ್ರತಿಭಟನೆ

ಸದಾಶಿವ ಆಯೋಗ ವರದಿ ಜಾರಿಗೆ ಒತ್ತಾಯ
Last Updated 9 ಸೆಪ್ಟೆಂಬರ್ 2020, 16:28 IST
ಅಕ್ಷರ ಗಾತ್ರ

ಬೀದರ್: ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸುಪ್ರೀಂಕೋರ್ಟ್‍ನ ಐವರು ನ್ಯಾಯಮೂರ್ತಿಗಳ ಪೀಠ ಒಳ ಮೀಸಲಾತಿ ಪರ ಅಭಿಪ್ರಾಯ ವ್ಯಕ್ತಪಡಿಸಿದೆ. ಹಿಂದುಳಿದ ವರ್ಗಗಳಲ್ಲಿ ಒಳಮೀಸಲಾತಿ ಇರುವುದಾದರೆ ಪರಿಶಿಷ್ಟ ಜಾತಿಗಳಿಗೂ ಅನ್ವಯಿಸುವುದು ತಪ್ಪಲ್ಲ ಎನ್ನುವ ಸಂದೇಶ ನೀಡಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದರೆ ಒಳ ಮೀಸಲಾತಿ ಜಾರಿಗೊಳಿಸುವುದಾಗಿ ಚುನಾವಣೆ ಪೂರ್ವದಲ್ಲಿ ಭರವಸೆ ಕೊಟ್ಟಿದ್ದರು. ಸಮುದಾಯ ಬೆಂಬಲ ನೀಡಿತ್ತು. ವಿಧಾನ ಮಂಡಲ ಅಧಿವೇಶನದಲ್ಲಿ ಒಳ ಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕಡ್ಯಾಳ, ಕಾರ್ಯಾಧ್ಯಕ್ಷ ಜೈರಾಜ ಸದ್ಲಾಪುರೆ, ಉಪಾಧ್ಯಕ್ಷರಾದ ಸುಭಾಷ ವರ್ಮಾ, ಯಶವಂತ, ಮಾದರ ಚನ್ನಯ್ಯ ಹೋರಾಟ ಸಮಿತಿಯ ರಾಜ್ಯ ಅಧ್ಯಕ್ಷ ರಮೇಶ ಕಟ್ಟಿತೂಗಾಂವ, ಸಿ.ಎಂ. ದಾಸ, ಸಂಜುಕುಮಾರ ಬೇಂದ್ರೆ, ಬಂಟಿ ದರ್ಬಾರೆ, ಪ್ರಸಾದ ಮನ್ನಳ್ಳಿ ಮೊದಲಾದವರು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT