<p><strong>ಬೀದರ್: </strong>ಪದವಿ ಅಂತಿಮ ವರ್ಷದ ಪರೀಕ್ಷೆ ಕಾರಣ ಹಾಸ್ಟೆಲ್ಗಳನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಡ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಪದವಿ ಅಂತಿಮ ವರ್ಷದ ಪರೀಕ್ಷೆಗಳು ಸೆಪ್ಟೆಂಬರ್ 8 ರಿಂದ ಆರಂಭವಾಗಲಿವೆ. ಆದರೆ, ಈವರೆಗೂ ಹಾಸ್ಟೆಲ್ಗಳನ್ನು ಪುನರಾರಂಭಿಸಿಲ್ಲ ಎಂದು ಹೇಳಿದರು.</p>.<p>ಕೆಲ ಕಡೆ ಬಸ್ ಸೌಕರ್ಯ ಇಲ್ಲ. ಇದ್ದರೂ, ಪರೀಕ್ಷೆಗೆ ಸರಿಯಾದ ಸಮಯಕ್ಕೆ ಹಾಜರಾಗುವುದು ಕಷ್ಟಕರವಾಗಿದೆ. ಹೀಗಾಗಿ ಹಾಸ್ಟೆಲ್ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಆರ್ಗನೈಸೇಷನ್ ಸದಸ್ಯ ಲಕ್ಷ್ಮಣ ಪಿ. ಮಚ್ಕೂರೆ, ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶರಣಪ್ಪ, ಪ್ರವೀಣ, ಪ್ರಶಾಂತ, ರವಿಕುಮಾರ, ವಿಜಯಕುಮಾರ, ಬೀರಗೊಂಡ, ಮಲ್ಲಿನಾಥ, ಶಿವಕುಮಾರ, ಆಕಾಶ, ಅಲೋಕ್, ನವೀನ್, ವಿಷ್ಣು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಪದವಿ ಅಂತಿಮ ವರ್ಷದ ಪರೀಕ್ಷೆ ಕಾರಣ ಹಾಸ್ಟೆಲ್ಗಳನ್ನು ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಡ್ಸ್ ಆರ್ಗನೈಸೇಷನ್ ನೇತೃತ್ವದಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.</p>.<p>ಪದವಿ ಅಂತಿಮ ವರ್ಷದ ಪರೀಕ್ಷೆಗಳು ಸೆಪ್ಟೆಂಬರ್ 8 ರಿಂದ ಆರಂಭವಾಗಲಿವೆ. ಆದರೆ, ಈವರೆಗೂ ಹಾಸ್ಟೆಲ್ಗಳನ್ನು ಪುನರಾರಂಭಿಸಿಲ್ಲ ಎಂದು ಹೇಳಿದರು.</p>.<p>ಕೆಲ ಕಡೆ ಬಸ್ ಸೌಕರ್ಯ ಇಲ್ಲ. ಇದ್ದರೂ, ಪರೀಕ್ಷೆಗೆ ಸರಿಯಾದ ಸಮಯಕ್ಕೆ ಹಾಜರಾಗುವುದು ಕಷ್ಟಕರವಾಗಿದೆ. ಹೀಗಾಗಿ ಹಾಸ್ಟೆಲ್ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಆಗ್ರಹಿಸಿದರು.</p>.<p>ಆರ್ಗನೈಸೇಷನ್ ಸದಸ್ಯ ಲಕ್ಷ್ಮಣ ಪಿ. ಮಚ್ಕೂರೆ, ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಾದ ಶರಣಪ್ಪ, ಪ್ರವೀಣ, ಪ್ರಶಾಂತ, ರವಿಕುಮಾರ, ವಿಜಯಕುಮಾರ, ಬೀರಗೊಂಡ, ಮಲ್ಲಿನಾಥ, ಶಿವಕುಮಾರ, ಆಕಾಶ, ಅಲೋಕ್, ನವೀನ್, ವಿಷ್ಣು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>