<p><strong>ಬಸವಕಲ್ಯಾಣ</strong>: ತಮ್ಮ ಹೊಲಕ್ಕೆ ದಾರಿ ಒದಗಿಸಲು ಆಗ್ರಹಿಸಿ ತಾಲ್ಲೂಕಿನ ಗೋಕುಳದ ರೈತ ಬಾಬುರಾವ್ ಘೋರವಾಡೆ ಅವರು ಮಂಗಳವಾರ ನಗರದ ತಹಶೀಲ್ದಾರ್ ಕಚೇರಿ ಎದುರಲ್ಲಿ ಧರಣಿ ನಡೆಸಿದರು. ಬಳಿಕ ತಹಶೀಲ್ದಾರ್ ಶಾಂತಗೌಡ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಗ್ರಾಮದ ಸರ್ವೆ ನಂ.58/1 ಮತ್ತು 58/2 ಜಮೀನಿಗೆ ಹೋಗಲು ದಾರಿಯೇ ಇಲ್ಲ. ಸಂಬಂಧಿಕರು ಹೊಲ ಹಂಚಿಕೊಂಡ ನಂತರದಲ್ಲಿ ಈ ಜಮೀನು ನನ್ನ ಪಾಲಿಗೆ ಬಂದಿದೆ. ಅಂದಿನಿಂದ ದಾರಿ ನೀಡುವುದಿಲ್ಲ ಎಂದು ಅವರು ಜಗಳ ತೆಗೆಯುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಗೆ ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಹೇಳಿದರು.</p>.<p>ನಾನು ಅಂಗವಿಕಲನಾಗಿದ್ದು, ಅನ್ಯ ಕೆಲಸ ಮಾಡಲು ಕಷ್ಟಪಡಬೇಕಾಗುತ್ತದೆ. ಹೀಗಾಗಿ ಈಗಿರುವ ಹೊಲಕ್ಕೆ ದಾರಿಯಿಲ್ಲ. ದಾರಿಗಾಗಿ ಮೇಲಿಂದ ಮೇಲೆ ಜಗಳವಾಗುತ್ತಿದೆ. ಆದರೂ ಸಂಬಂಧಿಸಿದವರು ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಧರಣಿ ಕೈಗೊಂಡಿದ್ದೇನೆ. ಸಮಸ್ಯೆಗೆ ಪರಿಹಾರ ದೊರಕುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಸವಕಲ್ಯಾಣ</strong>: ತಮ್ಮ ಹೊಲಕ್ಕೆ ದಾರಿ ಒದಗಿಸಲು ಆಗ್ರಹಿಸಿ ತಾಲ್ಲೂಕಿನ ಗೋಕುಳದ ರೈತ ಬಾಬುರಾವ್ ಘೋರವಾಡೆ ಅವರು ಮಂಗಳವಾರ ನಗರದ ತಹಶೀಲ್ದಾರ್ ಕಚೇರಿ ಎದುರಲ್ಲಿ ಧರಣಿ ನಡೆಸಿದರು. ಬಳಿಕ ತಹಶೀಲ್ದಾರ್ ಶಾಂತಗೌಡ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.</p>.<p>ಗ್ರಾಮದ ಸರ್ವೆ ನಂ.58/1 ಮತ್ತು 58/2 ಜಮೀನಿಗೆ ಹೋಗಲು ದಾರಿಯೇ ಇಲ್ಲ. ಸಂಬಂಧಿಕರು ಹೊಲ ಹಂಚಿಕೊಂಡ ನಂತರದಲ್ಲಿ ಈ ಜಮೀನು ನನ್ನ ಪಾಲಿಗೆ ಬಂದಿದೆ. ಅಂದಿನಿಂದ ದಾರಿ ನೀಡುವುದಿಲ್ಲ ಎಂದು ಅವರು ಜಗಳ ತೆಗೆಯುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಗೆ ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನ ಆಗಿಲ್ಲ ಎಂದು ಹೇಳಿದರು.</p>.<p>ನಾನು ಅಂಗವಿಕಲನಾಗಿದ್ದು, ಅನ್ಯ ಕೆಲಸ ಮಾಡಲು ಕಷ್ಟಪಡಬೇಕಾಗುತ್ತದೆ. ಹೀಗಾಗಿ ಈಗಿರುವ ಹೊಲಕ್ಕೆ ದಾರಿಯಿಲ್ಲ. ದಾರಿಗಾಗಿ ಮೇಲಿಂದ ಮೇಲೆ ಜಗಳವಾಗುತ್ತಿದೆ. ಆದರೂ ಸಂಬಂಧಿಸಿದವರು ಕ್ರಮಕೈಗೊಳ್ಳುತ್ತಿಲ್ಲ. ಹೀಗಾಗಿ ಧರಣಿ ಕೈಗೊಂಡಿದ್ದೇನೆ. ಸಮಸ್ಯೆಗೆ ಪರಿಹಾರ ದೊರಕುವವರೆಗೆ ಇಲ್ಲಿಂದ ಕದಲುವುದಿಲ್ಲ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>