ನ.18ರಂದು ಬೆಳಿಗ್ಗೆ 10.30ಕ್ಕೆ ಭಾಲ್ಕೇಶ್ವರ ಮಂದಿರದ ಆವರಣದಿಂದ ಪ್ರತಿಭಟನಾ ಮೆರವಣಿಗೆ ಹೊರಟು ಪ್ರಮುಖ ರಸ್ತೆ, ವೃತ್ತಗಳ ಮೂಲಕ ಸಾಗಿಬಂದು ಮಹಾತ್ಮ ಗಾಂಧಿ ವೃತ್ತದಲ್ಲಿ ಸಮಾವೇಶ ನಡೆಸಲಾಗುವುದು. ವಸತಿ ಯೋಜನೆ ಫಲಾನುಭವಿಗಳು, ಮಹಿಳೆಯರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು. ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಹಣಮಂತರಾವ್ ಚವ್ಹಾಣ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ ಮುಗನೂರ್, ನಗರ ಘಟಕದ ಅಧ್ಯಕ್ಷ ಅಬ್ದುಲ್ ನಸೀರ್, ಪುರಸಭೆ ಅಧ್ಯಕ್ಷ ಅನಿಲ್ ಸುಂಟೆ, ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷ ಅಶೋಕ ಗಾಯಕವಾಡ್, ಸದಸ್ಯ ವಿಜಯಕುಮಾರ, ಅಶೋಕ ಸೋನಜಿ, ಶಿವರಾಜ ಹಾಸನಕರ್ ಹಾಗೂ ಮಡಿವಾಳಪ್ಪ ಮಂಗಲಗಿ ಇದ್ದರು.