ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿ ಭೇಟಿ ನೀಡಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು. ಆಗ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವ ಪ್ರಭು ಚವಾಣ್, ‘ಕುಟುಂಬ ಸದಸ್ಯರಿಗೆ ಕಾನೂನು ಪ್ರಕಾರ ನ್ಯಾಯ ಒದಗಿಸಲಾಗುವುದು. ಅನ್ಯಾಯ ಆಗದಂತೆ ಎಚ್ಚರ ವಹಿಸಲಾಗುವುದು. ಯುವಕನ ಪತ್ನಿ ಮತ್ತು ಇಬ್ಬರು ಮಕ್ಕಳಿಗೆ ಅಗತ್ಯ ಶೈಕ್ಷಣಿಕ ಸೌಲಭ್ಯ ನೀಡಿ, ಕುಟುಂಬ ನಿರ್ವಹಣೆಗೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು’ ಎಂದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದರು. ಕೊಲೆ ಪ್ರಕರಣವು ಸಂತಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಔರಾದ್ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರನಾಥ ನೇತೃತ್ವದಲ್ಲಿ ತನಿಖೆ ಪ್ರಗತಿಯಲ್ಲಿದೆ.