<p><strong>ಔರಾದ್: </strong>ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಸಮರ್ಪಕ ಬಸ್ ಸೇವೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ಬಂದು ಶಾಲಾ ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದರೂ ಸಮರ್ಪಕ ಬಸ್ ಸೇವೆ ಕಲ್ಪಿಸಿಲ್ಲ ಎಂದು ದೂರಿದರು.</p>.<p>ಬಸ್ ಸೌಲಭ್ಯದ ಕೊರತೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ ಕಾಲೇಜಿಗೆ ಹೋಗಲು ಸಾಧ್ಯವಾಗದೆ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.</p>.<p>ವಸತಿನಿಲಯ ಪೂರ್ಣ ಪ್ರಮಾಣ ದಲ್ಲಿ ಆರಂಭವಾಗಿಲ್ಲ. ಅಧಿಕಾರಿಗಳು ಪ್ರವೇಶ ಮಾಡಿಕೊ ಳ್ಳುವುದರಲ್ಲಿಯೇ ಕಾಲಹರಣ ಮಾಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರುತ್ತಿದ್ದಾರೆ. ಒಂದು ವಾರ ದಲ್ಲಿ ಎಲ್ಲ ಸಮಸ್ಯೆ ಪರಿಹಾ ವಾಗದಿದ್ದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.</p>.<p>ಬೇಡಿಕೆ ಕುರಿತು ಸಿರಸ್ತೆದಾರ್ ಶ್ರೀದೇವಿ ನವಾಡೆ ಅವರಿಗೆ ಮನವಿ ಸಲ್ಲಿಸಿದರು.ವಿದ್ಯಾರ್ಥಿ ಮುಖಂಡರಾದ ಹಾವಪ್ಪ ದ್ಯಾಡೆ, ಅಶೋಕ ಶೆಂಬೆಳ್ಳಿ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಔರಾದ್: </strong>ತಾಲ್ಲೂಕಿನ ಗ್ರಾಮೀಣ ಪ್ರದೇಶದಲ್ಲಿ ಅಸಮರ್ಪಕ ಬಸ್ ಸೇವೆ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಕೋವಿಡ್ ನಿಯಂತ್ರಣಕ್ಕೆ ಬಂದು ಶಾಲಾ ಕಾಲೇಜು ಆರಂಭವಾಗಿ ಎರಡು ತಿಂಗಳು ಕಳೆದರೂ ಸಮರ್ಪಕ ಬಸ್ ಸೇವೆ ಕಲ್ಪಿಸಿಲ್ಲ ಎಂದು ದೂರಿದರು.</p>.<p>ಬಸ್ ಸೌಲಭ್ಯದ ಕೊರತೆಯಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಶಾಲೆ ಕಾಲೇಜಿಗೆ ಹೋಗಲು ಸಾಧ್ಯವಾಗದೆ ಕಲಿಕೆಗೆ ಹಿನ್ನಡೆಯಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.</p>.<p>ವಸತಿನಿಲಯ ಪೂರ್ಣ ಪ್ರಮಾಣ ದಲ್ಲಿ ಆರಂಭವಾಗಿಲ್ಲ. ಅಧಿಕಾರಿಗಳು ಪ್ರವೇಶ ಮಾಡಿಕೊ ಳ್ಳುವುದರಲ್ಲಿಯೇ ಕಾಲಹರಣ ಮಾಡಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಕುತ್ತು ತರುತ್ತಿದ್ದಾರೆ. ಒಂದು ವಾರ ದಲ್ಲಿ ಎಲ್ಲ ಸಮಸ್ಯೆ ಪರಿಹಾ ವಾಗದಿದ್ದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.</p>.<p>ಬೇಡಿಕೆ ಕುರಿತು ಸಿರಸ್ತೆದಾರ್ ಶ್ರೀದೇವಿ ನವಾಡೆ ಅವರಿಗೆ ಮನವಿ ಸಲ್ಲಿಸಿದರು.ವಿದ್ಯಾರ್ಥಿ ಮುಖಂಡರಾದ ಹಾವಪ್ಪ ದ್ಯಾಡೆ, ಅಶೋಕ ಶೆಂಬೆಳ್ಳಿ ಹಾಗೂ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>