ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ನಂತರ ಜಾಗತೀಕರಣ, ಖಾಸಗೀಕರಣ, ಉದಾರೀಕರಣ ನೀತಿಗಳನ್ನು ತ್ವರಿತಗತಿಯಲ್ಲಿ ಜಾರಿಗೊಳಿಸಿದ್ದಾರೆ. ಎಲ್ಐಸಿ, ಬಿಎಸ್ಎನ್ಎಲ್ ಖಾಸಗೀಕರಣಗೊಳಿಸಿದ್ದಾರೆ. ಎಪಿಎಂಸಿಗೆ ಎದುರಾಗಿ ಖಾಸಗಿ ಮಾರುಕಟ್ಟೆಗೆ ಅವಕಾಶ ಕೊಟ್ಟಿದ್ದಾರೆ. ಕೃಷಿಯನ್ನು ಕಾರ್ಪೋರೇಟ್ ಮಾಲೀಕರಿಗೆ ವಹಿಸಿದ್ದಾರೆ. ಎಚ್ಎಎಲ್ ಷೇರುಗಳನ್ನು ಮಾರಾಟಕ್ಕೆ ಇಡಲಾಗಿದೆ ಎಂದು ಆಪಾದಿಸಿದರು.